ಪ್ರಜೆಗಳ ಹಕ್ಕುಗಳ ಹಿತರಕ್ಷಕ ನಮ್ಮ ಸಂವಿಧಾನ


Team Udayavani, Aug 16, 2020, 7:57 PM IST

India_flag_emblem

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸಂವಿಧಾನ ಎನ್ನುವಂಥದ್ದು ಕೇವಲ ಒಂದು ಪುಸ್ತಕವೋ ಅಥವಾ ಒಂದು ದಾಖಲೆಯೋ ಅಲ್ಲ.

ಅದು ನಮ್ಮ ಜೀವನದ ವಿಧಾನ, ಬದುಕಿನ ಒಂದು ಕ್ರಮ.

ಅದರಲ್ಲೂ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಂತಹ ರಾಷ್ಟ್ರಗಳಲ್ಲಿ ಸಂವಿಧಾನದ ಪಾತ್ರ ಅತ್ಯಂತ ಮಹತ್ವದ್ದು.

ಬ್ರಿಟಿಷರು ಭಾರತದಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ ನಾವು ಗುಲಾಮರಾಗಿದ್ದೆವು.

ಆದರೆ ಇಂದು ನಾವು ಗುಲಾಮರಲ್ಲ, ಪ್ರಜೆಗಳು. ಹಾಗಾದರೆ ಪ್ರಜ್ಞಾವಂತ ಪ್ರಜೆಯ ಹಕ್ಕುಗಳೇನು? ಆ ಹಕ್ಕುಗಳನ್ನು ನಾವು ಹೇಗೆ ಪಡೆದುಕೊಳ್ಳಬಹುದು? ಪ್ರಜೆಗೂ ಸರಕಾರಕ್ಕೂ ನಡುವೆ ಇರುವ ಸಂಬಂಧ ಎಂಥದ್ದು? ಪ್ರತಿಯೊಬ್ಬ ಪ್ರಜೆಯೂ ಚಲಾಯಿಸಬಹುದಾದ ಹಕ್ಕುಗಳು ಯಾವುವು? ಹೀಗೆ ಒಬ್ಬ ವ್ಯಕ್ತಿಯನ್ನು ಪ್ರಜ್ಞಾವಂತ ಪ್ರಜೆಯನ್ನಾಗಿಸುವ ಎಲ್ಲ ಅವಕಾಶಗಳೂ ಸಂವಿಧಾನದಲ್ಲಡಗಿದೆ.

ಸಂವಿಧಾನ ಇಡೀ ರಾಷ್ಟ್ರವನ್ನು ನಡೆಸುವ ಶಕ್ತಿಯನ್ನು ಹೊಂದಿರುವ ಒಂದು ನೀತಿ ಸಂಹಿತೆ. ಪ್ರತಿಯೊಬ್ಬ ವ್ಯಕ್ತಿಯ ಜೀವಿಸುವ ಹಕ್ಕಿನಿಂದ ಪ್ರಾರಂಭವಾಗಿ, ಸಮಾನತೆಯ ಹಕ್ಕು, ಸ್ವಾತಂತ್ರ್ಯದ ಹಕ್ಕು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಹೀಗೆ ಆ ವ್ಯಕ್ತಿಯ ಮೂಲ ಕರ್ತವ್ಯದ ವರೆಗೂ ಸಂಪೂರ್ಣ ಜ್ಞಾನವನ್ನು ನೀಡುವ ಲಿಖೀತ ರೂಪದ ದೇಶದ ಸರ್ವೋಚ್ಚ ಕಾನೂನೇ ಭಾರತ ಸಂವಿಧಾನ.

ಒಬ್ಬ ಪ್ರಜೆ ದೇಶದ ನೀತಿ ನಿಯಮಗಳ ಬಗ್ಗೆ ಅರಿವನ್ನು ಹೊಂದಿದಾಗ, ಸರ‌ಕಾರದ ರಚನೆಯ ಬಗ್ಗೆ ತಿಳಿವಳಿಕೆ ಇದ್ದಾಗ, ತನ್ನ ಹಕ್ಕು ಮತ್ತು ಕರ್ತವ್ಯಗಳ ಅರಿವಿದ್ದಾಗ ಮಾತ್ರ ಆತ ತನ್ನ ಹಕ್ಕನ್ನು ಚಲಾಯಿಸಲು ಸಾಧ್ಯ, ತನ್ನ ಕರ್ತವ್ಯವನ್ನು ನಿಭಾಯಿಸಲು ಸಾಧ್ಯ, ಸರಕಾರದ ರಚನೆಯಲ್ಲಿ ಭಾಗವಹಿಸಲು ಸಾಧ್ಯ, ಸರಿಯಾದ ವ್ಯಕ್ತಿಯನ್ನು ಚುನಾಯಿಸಲು ಸಾಧ್ಯ. ಇವೆಲ್ಲವನ್ನೂ ಸಂವಿಧಾನ ವಿವರಿಸುತ್ತದೆ. ಹಾಗಾಗಿ ಪ್ರತಿಯೊಬ್ಬ ಭಾರತೀಯನಿಗೂ ಸಂವಿಧಾನದ ಅರಿವಿದ್ದಾಗ ಮಾತ್ರ ಉತ್ತಮ ಆಡಳಿತ ಸಾಧ್ಯ. ಯಾವುದೇ ವ್ಯಕ್ತಿ ಕಾನೂನಿನ ತಿಳಿವಳಿಕೆಯನ್ನು ಹೊಂದಿರಲಿ ಅಥವಾ ಇಲ್ಲದೇ ಇರಲಿ, ಕಾನೂನಿನ ಚೌಕಟ್ಟಿನ ಹೊರತು ಜೀವಿಸಲು ಸಾಧ್ಯವಿಲ್ಲ. ಹಾಗಾಗಿ ಕಾನೂನಿನ ಜ್ಞಾನ ಪ್ರತಿಯೊಬ್ಬ ಪ್ರಜೆಗೂ ಅತ್ಯಂತ ಅವಶ್ಯ. ಭಾರತ ಸಂವಿಧಾನ ನಮ್ಮ ದೇಶದ ಉಚ್ಚ ಕಾನೂನಾಗಿದ್ದು, ಅದರ ತಿಳಿವಳಿಕೆಯಿಂದ ಮಾತ್ರ ಪ್ರಜಾಪ್ರಭುತ್ವದ ಗುರಿ ತಲುಪಲು ಸಾಧ್ಯ.

ಭಾರತ ಸಂವಿಧಾನದ ಪ್ರಸ್ತಾವನೆಯೇ ಹೇಳುವಂತೆ ಭಾರತ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ವಿಶ್ವಾಸ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರÂವನ್ನು, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಕ್ಕಾಗಿ ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸೋದರ ಭಾವನೆಯನ್ನು ಮೂಡಿಸುವುದಕ್ಕಾಗಿ ದೃಢ ಸಂಕಲ್ಪ ಮಾಡಿ ಸಂವಿಧಾನವನ್ನು ಅಂಗೀಕರಿಸಿದೆ.

ಸಂವಿಧಾನ ದೇಶದ ಪ್ರತಿಯೊಬ್ಬ ಪ್ರಜೆಯ ಸೊತ್ತು. ಪ್ರತಿಯೊಬ್ಬ ವ್ಯಕ್ತಿ ಸಂವಿಧಾನವನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡಾಗ ಮಾತ್ರ ಆತ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ಪಡೆಯಬಹುದು. ಪ್ರತಿಯೊಬ್ಬ ಪ್ರಜೆ ಸಂವಿಧಾನದಲ್ಲಿ ಮಂಡಿಸಲಾದ ತನ್ನ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಡೆಸುವಂತಾದಾಗ, ಪ್ರತಿಯೊಬ್ಬ ಪ್ರಜೆಯೂ ತನ್ನ ಹಕ್ಕನ್ನು ಅರಿತು ಅದನ್ನು ಚಲಾಯಿಸುವಂತಾದಾಗ ಸಂವಿಧಾನದ ರಚನೆಯ ಮೂಲ ಉದ್ದೇಶದ ಸಾಧನೆ ಸಾಧ್ಯ. ಆಗ ಮಾತ್ರ ದೇಶದ ಏಕತೆ ಮತ್ತು ದೇಶದ ಸಮಗ್ರತೆ ಸಾಧ್ಯ.

ಹಾಗಾಗಿ ಪ್ರತಿಯೊಬ್ಬ ಪ್ರಜ್ಞಾವಂತ ಪ್ರಜೆಯೂ ಸಂವಿಧಾನವನ್ನು ಓದಲೇಬೇಕಾದ ಅಗತ್ಯವಿದೆ. ಇದೇ ಕಾರಣದಿಂದಲೇ ಶಾಸಕಾಂಗ “ಸಂವಿಧಾನ ಓದು’ ಕಾರ್ಯಕ್ರಮ ಹಮ್ಮಿಕೊಂಡು ಸಂವಿಧಾನದ ಪ್ರಾಮುಖ್ಯದ ಅರಿವನ್ನು ಮೂಡಿಸುವ ಪ್ರಯತ್ನ ಮಾಡಿದೆ. ಸರಕಾರ ಎಲ್ಲ ಪದವಿ ವಿದ್ಯಾರ್ಥಿಗಳಿಗೂ ಭಾರತ ಸಂವಿಧಾನವನ್ನು ಒಂದು ವಿಷಯವಾಗಿ ಪರಿಚಯಿಸಿದೆ. ಆದ್ದರಿಂದ ಒಬ್ಬ ವ್ಯಕ್ತಿ ದೇಶದ ಪ್ರಜ್ಞಾವಂತ ಪ್ರಜೆಯೆನಿಸಿಕೊಳ್ಳಬೇಕಾದರೆ ಸರಕಾರ ರಚನೆಯ ತಿಳಿವಳಿಕೆ ಹೊಂದುವುದು, ಸರಕಾರ ರಚನೆಯಲ್ಲಿ ಭಾಗವಹಿಸುವುದು, ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಅರ್ಥೈಸಿಕೊಳ್ಳುವುದು, ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳ ನಡುವಿನ ಸಂಬಂಧ ಅರಿತು ಅವುಗಳ ಕಾರ್ಯವೈಖರಿಯನ್ನು ಅರಿಯುವುದು ಮುಖ್ಯ. ಇವೆಲ್ಲವುಗಳ ಜ್ಞಾನ ಕೇವಲ ಸಂವಿಧಾನದಿಂದ ಸಾಧ್ಯ. ಆದುದ‌ರಿಂದ ದೇಶದ ಸರ್ವೋಚ್ಚ ಕಾನೂನಾದ  ಸಂವಿಧಾನವನ್ನು ಓದುವುದು ಅವಶ್ಯ.

ಸ್ವಾತಿ ಹೆಗಡೆ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ, ಹುಬ್ಬಳ್ಳಿ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

5-uv-fusion

Yugadi: ವರುಷದ ಆದಿ ಯುಗಾದಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.