ನಾಡುಕಂಡ ಶ್ರೇಷ್ಠ ಕವಿ ಡಾ| ಸಿದ್ದಲಿಂಗಯ್ಯ


Team Udayavani, Jul 3, 2021, 3:51 PM IST

ನಾಡುಕಂಡ ಶ್ರೇಷ್ಠ ಕವಿ ಡಾ| ಸಿದ್ದಲಿಂಗಯ್ಯ

ಕನ್ನಡ ನಾಡಿನ ಹಿರಿಯ ಸಾಹಿತಿಗಳಲ್ಲೊಬ್ಬರಾಗಿದ್ದ ಸರಳ ಸಜ್ಜನಿಕೆಯ ಡಾ| ಸಿದ್ಧಲಿಂಗಯ್ಯ ಮೂರ್ತರಾದರೂ ಅಮೂರ್ತರು.  ಹೊಡಿಯಿರ್ಲಾ, ಬಡಿಯಿರ್ಲಾ ಎಂಬುದನ್ನು ಕೇವಲ ಕೃತಿಗಷ್ಟೇ ಸೀಮಿತವಾಗಿರಿಸಿ ಸರಳವಾಗಿ ಮತ್ತೂಬ್ಬರಿಗೆ ಮಾದರಿಯಾಗಿ ಬದುಕಿದ ಕವಿ ಸಿದ್ದಲಿಂಗಯ್ಯಅವರು.

ಸಿದ್ದಲಿಂಗಯ್ಯ ಅವರು 1954ರ ಫೆಬ್ರವರಿ 3ರಂದು ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆಯಲ್ಲಿ ಜನಿಸಿದರು.  ಅವರು  1974ರಲ್ಲಿ ಬೆಂಗಳೂರಿನ ಸರಕಾರಿ ಕಲಾಕಾಲೇಜಿನಿಂದ ಬಿ.ಎ. ಆನರ್ಸ್‌ (ಐಚ್ಛಿಕ ಕನ್ನಡ) ಪದವಿಯನ್ನು ಪಡೆದರಲ್ಲದೆ, 1976ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರೊ| ಡಿ.ಎಲ್‌. ನರಸಿಂಹಾಚಾರ್ಯರ ಸ್ವರ್ಣಪದಕದೊಂದಿಗೆ ಪ್ರಥಮ ಶ್ರೇಣಿಯಲ್ಲಿ ಎಂ.ಎ. ಪದವಿಯನ್ನು ಪಡೆದರು.  ಪ್ರೊ| ಜಿ.ಎಸ್‌. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ “ಗ್ರಾಮದೇವತೆಗಳು’ ಎಂಬ ಪ್ರೌಢ ಪ್ರಬಂಧವನ್ನು ಮಂಡಿಸಿ 1989ರಲ್ಲಿ ಪಿಎಚ್‌.ಡಿ. ಪದವಿಯನ್ನು ಗಳಿಸಿದರು. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ  ಬಗ್ಗೆ ತಮ್ಮೊಳಗೆ ಮೊಳೆಯೊಡೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನು ವ್ಯಕ್ತಪಡಿಸಲು ಸಿದ್ದಲಿಂಗಯ್ಯಅವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮ. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ “ಹೊಲೆಮಾದಿಗರ ಹಾಡು’ 1975ರಲ್ಲಿ ಪ್ರಕಟಗೊಂಡಿತು. ಮುಂದೆ ಅವರ “ಸಾವಿರಾರು ನದಿಗಳು’, “ಕಪ್ಪುಕಾಡಿನ ಹಾಡು’, “ಮೆರವಣಿಗೆ’,  “ನನ್ನ ಜನಗಳು ಮತ್ತು ಇತರ ಕವಿತೆಗಳು’, “ಆಯ್ದ ಕವನಗಳು’ ಮುಂತಾದ ಕವನ ಸಂಕಲನಗಳು  ಪ್ರಕಟಗೊಂಡವು.

ಸಿದ್ದಲಿಂಗಯ್ಯನವರ “ಪಂಚಮ ಮತ್ತು ನೆಲಸಮ’, “ಏಕಲವ್ಯ’  ಪ್ರಮುಖ ನಾಟಕಗಳಾದರೆ “ಅವತಾರಗಳು’ ಪ್ರಬಂಧ ಕೃತಿ. ಇವಲ್ಲದೆ ರಸಗಳಿಗೆಗಳು, ಎಡಬಲ,  ಹಕ್ಕಿನೋಟ, ಜನಸಂಸ್ಕೃತಿ, ಉರಿಕಂಡಾಯ ಮುಂತಾದ ಲೇಖನ ಸಂಗ್ರಹಗಳು,ಆತ್ಮಕಥನ ಊರು-ಕೇರಿ ಪ್ರಕಟಗೊಂಡಿವೆ.

ಇವರ “ಊರು ಕೇರಿ’ ಆತ್ಮಕಥೆ ಇಂಗ್ಲಿಷ್‌ ಹಾಗೂ ತಮಿಳಿಗೂ ಅನುವಾದಗೊಂಡಿದ್ದು, ಇಂಗ್ಲಿಷ್‌ ಅನುವಾದವನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಕಟಿಸಿದೆ. ಸಿದ್ದಲಿಂಗಯ್ಯನವರ ಹಲವಾರು ಕವಿತೆಗಳು ಇಂಗ್ಲಿಷ್‌, ಹಿಂದಿ, ತಮಿಳು, ಬಂಗಾಲಿ, ಮಲಯಾಳ ಮತ್ತು ತೆಲುಗು ಭಾಷೆಗಳಲ್ಲಿ ಅನುವಾದಗೊಂಡಿವೆ.

ಪುಟ್ಟಣ್ಣ ಕಣಗಾಲರು ನಿರ್ದೇಶಿಸಿದ “ಧರಣಿಮಂಡಲ ಮಧ್ಯದೊಳಗೆ’ ಚಿತ್ರಕ್ಕೆ ಸಿದ್ದಲಿಂಗಯ್ಯ ಅವರು ಬರೆದ ಗೀತೆಗೆ 1983-84ರಲ್ಲಿ ರಾಜ್ಯಪ್ರಶಸ್ತಿ ಸಂದಿತ್ತು. ಪಣಜಿಯಲ್ಲಿ ನಡೆದ ಭಾರತೀಯ ಕನ್ನಡ ಸಮ್ಮೇಳನದ ಅಧ್ಯಕ್ಷತೆ, ಗೋರೆಗಾಂವ್‌ನ ವಿಚಾರ ಭಾರತಿ ಸಮ್ಮೇಳನದ ಅಧ್ಯಕ್ಷತೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಬೀದರ್‌ನಲ್ಲಿ ನಡೆದ ಶರಣ ಸಮ್ಮೇಳನದ ಅಧ್ಯಕ್ಷತೆ, ಮತ್ತು ಹಂಪಿ ಉತ್ಸವ, ಮೈಸೂರು ದಸರಾ ಮಹೋತ್ಸವ, ದಿಲ್ಲಿಯಲ್ಲಿ ನಡೆದ ದಕ್ಷಿಣ ಪ್ರಾಂತೀಯ ಸಮ್ಮೇಳನದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆ, ಆಳ್ವಾಸ್‌ ನುಡಿಸಿರಿ ಸಮ್ಮೇಳನ  ಹಾಗೂ ಶ್ರವಣಬೆಳಗೊಳದಲ್ಲಿ 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಮುಂತಾದ ಗೌರವಗಳು ಸಿದ್ದಲಿಂಗಯ್ಯನ ಅವರನ್ನು ಅರಸಿ ಬಂದಿದ್ದವು.

ಸಿದ್ದಲಿಂಗಯ್ಯಅವರು ನಿರಂತರವಾಗಿ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತ ಬಂದಿದ್ದು,  ಜಾನಪದ ಸಾಹಿತ್ಯ ಸಂಪಾದಕ ಮಂಡಲಿ, ಅಂಬೇಡ್ಕರ್‌ಕೃತಿಗಳ ಕನ್ನಡ ಭಾಷಾಂತರ ಮತ್ತು ಸಂಪಾದನ ಸಮಿತಿ, ರಾಮಮನೋಹರ ಲೋಹಿಯಾ ಅವರ ಕೃತಿಗಳ ಭಾಷಾಂತರ ಮತ್ತು ಸಂಪಾದನ ಸಮಿತಿ, ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯಕಾರಿ ಮಂಡಲಿ ಮುಂತಾದವುಗಳಲ್ಲಿ ಸದಸ್ಯರಾಗಿದ್ದುದರ  ಜತೆಗೆ ದಲಿತ ಸಂಘರ್ಷ ಸಮಿತಿ, ಬಂಡಾಯ ಸಾಹಿತ್ಯ ಸಂಘಟನೆಗಳ ಸ್ಥಾಪಕ ಸದಸ್ಯರಾಗಿದ್ದರು. ಸಿದ್ದಲಿಂಗಯ್ಯ ಅವರ ಸೃಜನಶೀಲ ಸಾಹಿತ್ಯ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಡಾ| ಅಂಬೇಡ್ಕರ್‌ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ| ಅಂಬೇಡ್ಕರ್‌ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್‌ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ ಮುಂತಾದ ಗೌರವಗಳು ಸಂದಿದ್ದವು.

ಕರ್ನಾಟಕ ವಿಧಾನ ಪರಿಷತ್‌ನ ಸದಸ್ಯರಾಗಿ 1988-94, 1995-2001 ರ ವರೆಗೆ ಎರಡು ಬಾರಿ ಕಾರ್ಯನಿರ್ವಹಿಸುವುದರ ಜತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ 2006-08 ಅವಧಿಯಲ್ಲಿ  ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಸಿದ್ದಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ  ಕಾರ್ಯ ನಿರ್ವಹಿಸಿದ್ದರು. ಉಪನ್ಯಾಸಗಳು ಮತ್ತು ಅವರ ಸರಳ ಸ್ನೇಹ ಗುಣ ಸದಾ ನೆನಪಲ್ಲಿ ಉಳಿಯುವಂತದ್ದು.

 

ವಿಜಯಕುಮಾರ್‌ಎಚ್‌. ಕೆ.

ಎ.ಜೆ. ಕಾಲೇಜು ಫಾರ್ಮಸಿ, ಮಂಗಳೂರು

 

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.