ಸದಾವತ್ಸಲೇ ಭರತಭೂಮಿ


Team Udayavani, Aug 15, 2020, 3:35 AM IST

india2

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

“ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ’

ಅಂದರೆ ತಾಯಿ ಮತ್ತು ತಾಯ್ನಾಡು ಸ್ವರ್ಗಕ್ಕಿಂತಲೂ ಮಿಗಿಲು.

ಸಸ್ಯದ ಬೇರು ಭುವಿಯೊಂದಿಗೆ ಭದ್ರವಾಗಿ ಹೇಗೆ ಬಂಧಿಸಲ್ಪಡುತ್ತದೆಯೋ, ಹಾಗೆ ಮಾನವನಿಗೂ ಭೂಮಿ ಅತ್ಯಂತಿಕವಾದದ್ದು.

ಸ್ವಾವಲಂಬಿಯಾಗಿ ಜೀವಿಸಲು ಅವಕಾಶ ಮಾಡಿಕೊಟ್ಟ, ಅತ್ಯಂತ ದೊಡ್ಡ ಲಿಖೀತ ಸಂವಿಧಾನವನ್ನು ಹೊಂದಿರುವ ದಿವ್ಯ-ಭವ್ಯ ದೇಶ ನಮ್ಮದು.
ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ಮುಂತಾದ ಪುಣ್ಯತಮ ನದಿಗಳು.

ಕಾಶಿ, ಮಥುರಾ, ಗಯಾ, ಕೇದಾರನಾಥ, ರಾಮೇಶ್ವರ ಇಂತಹ ಅನೇಕಾನೇಕ ತೀರ್ಥಕ್ಷೇತ್ರಗಳು; ಹಿಮಾಲಯ, ಅರಾವಳಿ, ವಿಂಧ್ಯ, ನೀಲಗಿರಿ, ಸಹ್ಯಾದ್ರಿ ಮುಂತಾದ ವನಸಿರಿಗಳಿಂದ ಕಣ್ತುಂಬಿಸುತ್ತಿರುವ ಪರ್ವತ ಶ್ರೇಣಿಗಳು; ಅಸಂಖ್ಯಾಕ ಕೈಗಾರಿಕೋದ್ಯಮಿಗಳು; ರಫೇಲ್‌ ಯುದ್ಧವಿಮಾನ ಸಹಿತವಾದ ಸಶಸ್ತ್ರ ಪಡೆ; ಪ್ರಪಂಚವೇ ಕಾಯಾ-ವಾಚಾ-ಮನಸಾ ಸ್ವೀಕರಿಸಿದ ಯೋಗ ಮತ್ತು ಆಯುರ್ವೇದ ಪದ್ಧತಿಗಳು.

ಜಗತ್ತೇ ತಲೆಯೆತ್ತಿ ನೋಡುವಂತಹ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಕಲೆಗಳು; ವಿಶ್ವವೇ ನಿಬ್ಬೆರಗಾಗಿ ನೋಡುವಂತಹ ಅತ್ಯದ್ಭುತ ಪ್ರತಿಭಾವಂತರು, ದಿವ್ಯ ಜ್ಞಾನಿಗಳಿಂದ ಕೂಡಿದ ಜ್ಞಾನರಥವೇ ಭಾರತ. ಇಂತಹ ಪುಣ್ಯಭೂಮಿಯಲ್ಲಿ ಜನಿಸಿದ ನಾವು ಭಾಗ್ಯವಂತರು ಎನ್ನಲು ಮನ ತುಂಬಿ ಬರುತ್ತದೆ.

ಭವ್ಯ ಭಾರತದ ನಿರ್ಮಾಣಕ್ಕಾಗಿ ಕಂಕಣಬದ್ಧರಾದ ನಮ್ಮ ದೊರೆಗಳು ಅಹೋರಾತ್ರಿಗಳ ಕಾಲ ಅವಿರತವಾಗಿ ಸರ್ವತೋಮುಖ ಬೆಳವಣಿಗೆಗೆ ದುಡಿಯುತ್ತಿರುವುದು, ಶತ್ರುದೇಶಗಳ ನಿದ್ದೆಗೆಡಿಸಿದೆ. ಸಮರಕ್ಕೆ ಮುಂದಾಗಿದ್ದ ಪ್ರಬಲ ರಾಷ್ಟ್ರಗಳು ಕೂಡ ನಮ್ಮ ದೇಶದ ದಿಟ್ಟ ನಿರ್ಧಾರ, ಧೈರ್ಯ, ಛಲಕ್ಕೆ ಬೆಕ್ಕಸಬೆರಗಾಗಿ ಹಿಂದಡಿ ಇಟ್ಟಿರುವುದು ಭಾರತದ ಪ್ರತಿಯೊಬ್ಬನೂ ಸಂತೋಷಪಡುವಂಥ ಸಂಗತಿ. ಇದಕ್ಕೆಲ್ಲ ಕಾರಣರಾದಂಥ‌ ನೇತಾರರನ್ನು ಪಡೆದಿರುವುದು ನಮಗೆ ಸಂತೋಷ, ಸಮಾಧಾನ, ತೃಪ್ತಿ, ನೆಮ್ಮದಿ, ಹೆಮ್ಮೆ ಮತ್ತು ಯಶಸ್ಸಿನ ಸಂಗತಿ.

ಜಿ.ರಮಾ, ಹೊಸಾಕುಳಿ, ಎಸ್‌.ಡಿ.ಎಂ. ಕಾಲೇಜು, ಹೊನ್ನಾವರ

 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.