ಮಾಯವಾದಂತಿದೆ.. ಸಂಸ್ಕಾರವೆಂಬ ಸಿರಿವಂತಿಕೆ


Team Udayavani, Jun 22, 2021, 8:00 AM IST

ಮಾಯವಾದಂತಿದೆ.. ಸಂಸ್ಕಾರವೆಂಬ ಸಿರಿವಂತಿಕೆ

ಜಂತೂನಾಂ ನರಜನ್ಮಮುತ್ತಮಂ ಜೀವಿಗಳಲ್ಲಿ ಮನುಷ್ಯ ಜನ್ಮ ಶ್ರೇಷ್ಠ ಜನ್ಮ. ವಿಕಸಿತ ಪ್ರಾಣಿಯ ಅಂತಿಮ ಹಂತವೇ ಮಾನವ ಜನ್ಮ. ಅದು ಪರಿಪೂರ್ಣವಾಗಬೇಕಾದರೆ ಸುನಡತೆ, ಸುಸಂಸ್ಕಾರ ಅತ್ಯಗತ್ಯ. ಮನುಷ್ಯರ ಸರ್ವತೋಮುಖ ಬೆಳವಣಿಗೆಗೆ ಸಂಸ್ಕಾರವು ಅತ್ಯಗತ್ಯ. ವಿಮರ್ಶಾತ್ಮಕ ವರ್ತನೆ ಮನುಷ್ಯನ ಜ್ಞಾನವನ್ನು ಸೂಚಿಸಿದರೆ, ಸಂಸ್ಕಾರವು ಮನೆತನವನ್ನು ಸೂಚಿಸುತ್ತದೆ.

ಜನ್ಮನಾ ಜಾಯತೆ ಪ್ರಾಣಿಃ ಕರ್ಮಣಾ ಮನುಷ್ಯೊಚ್ಯತೆ ಜನ್ಮದಿಂದ ಎಲ್ಲರೂ ಪ್ರಾಣಿಗಳು, ಆದರೆ ಅವರ ಕಾರ್ಯ ಚಟುವಟಿಕೆಗಳಿಂದ ಮನುಷ್ಯನೆಂದು ಗುರುತಿಸಿಕೊಳ್ಳುತ್ತಾನೆ. ಸಂಸ್ಕಾರ ಪೂರ್ವಕ  ಸನ್ನಡತೆಯ ಜನ್ಮಭೂಮಿ ನಮ್ಮ ಭಾರತ. ಪುರಾತನವಾದ, ಮಹೋನ್ನತವಾದ ತತ್ವ- ಮೌಲ್ಯಗಳನ್ನು ಹೊಂದಿರುವ ಭಾರತೀಯ ಸಂಸ್ಕೃತಿ ನಮ್ಮದು.  ಕಾಂಚಾಣೇನ ಕಾರ್ಯಸಿದ್ಧಿಃ  ಎನ್ನುವ ಈ ಕಾಲದಲ್ಲಿ ಕೇವಲ ವೃತ್ತಿಪರ ಶಿಕ್ಷಣದ ಪಥದಲ್ಲಿ ನಮ್ಮ ಆದರ್ಶ ಪರಂಪರೆಯ ಉತ್ತಮ ಮೌಲ್ಯಗಳು ನಶಿಸುತ್ತಿವೆ.

ಒಂದು ವಿಪರ್ಯಾಸ ಏನು ಗೊತ್ತಾ? ವಿದೇಶಿಗರು ನಮ್ಮ ಸಂಸ್ಕೃತಿ, ವೇದಗಳ ಆಚರಣೆಯ ಕಡೆಗೆ ಒಲವು ತೋರಿಸುತ್ತಿದ್ದಾರೆ. ಆದರೆ ನಮ್ಮವರು ವಿದೇಶಿ ಸಂಸ್ಕೃತಿಗೆ ಮಾರುಹೋಗುತ್ತಿದ್ದಾರೆ. ಮೊದಲು ವೇದಶಾಸ್ತ್ರಗಳ ಅಧ್ಯಯನಕ್ಕಾಗಿ ಚಿಕ್ಕಮಕ್ಕಳನ್ನು ಗುರುಕುಲಕ್ಕೆ ಕಳುಹಿಸುತ್ತಿದ್ದರು. ಆದರೆ ಈಗ ನಮಗೆ ಅಂತಹ ಗುರುಕುಲಗಳು ಕಾಣಸಿಗುವುದು ವಿರಳ. ಎಲ್ಲಿ ಹೋದವು ಗುರುಕುಲಗಳು? ಇಂದು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಬದಲು ವೃತ್ತಿಪರ ಶಿಕ್ಷಣ ನೀಡುತ್ತಿರುವುದರಿಂದ ಶಿಕ್ಷಣವೇ ವ್ಯಾಪಾರೋದ್ಯಮವಾಗಿ ಬದಲಾಗಿದೆ.

ಸ್ನಾತಕೋತ್ತರ ಪದವಿ ಪಡೆದರೂ ಗುರುಗಳನ್ನು ಕಂಡೊಡನೆ ತೋರಿಸುವ ಭಯ-ಭಕ್ತಿ, ಕೈಯಲ್ಲಿ ಲಕ್ಷಕೋಟಿ ಇದ್ದರೂ ಹಿರಿಯರನ್ನು ಕಂಡೊಡನೆ ಕಾಲಿಗೆ ಬೀಳುವುದು, ಹಸಿದು ಬಂದವರಿಗೆ ಅನ್ನವನ್ನು ನೀಡುವುದು, ಯಜಮಾನಿಕೆ ಕೈಯಲ್ಲಿದ್ದರೂ ಚಿಕ್ಕಮಕ್ಕಳಿಗೆ ತೋರಿಸುವ ಪ್ರೀತಿ, ಕನಿಕರ, ಕಳಕಳಿ, ನಮ್ಮ ನಡವಳಿಕೆಯಲ್ಲಿರುವ ನಯ-ವಿನಯ, ಉದಾರತೆ ಇವೆಲ್ಲ ಎಲ್ಲಿ ಹೋದವು? ಇವೆಲ್ಲಾ ಮಾಯವಾಗುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಈಗಿನ ಜನರು ತಮ್ಮ ಸಣ್ಣತನವನ್ನು ಪ್ರದರ್ಶನಕ್ಕಿಡುತ್ತಿದ್ದಾರೆ. ಹಿರಿಯರನ್ನು ಬಹಿರಂಗವಾಗಿ ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ಕಂಡರೆ ಸಂಸ್ಕಾರವೇ ಮಾಯವಾದಂತೆ ಭಾಸವಾಗುತ್ತಿದೆ.

ಸಂಸ್ಕಾರ ಎಂದಕೂಡಲೇ ಒಂದು ಕಥೆಯು ನೆನಪಿಗೆ ಬರುತ್ತದೆ. ಒಂದು ಊರಿನಲ್ಲಿ ಮೂವರು ಮಕ್ಕಳು ಶಾಲೆಯಿಂದ ಮನೆಗೆ ಬರುತ್ತಿದ್ದರು. ಅದೇ ಸಮಯದಲ್ಲಿ ಮೂವರು ಮಹಿಳೆಯರು ನೀರು ತುಂಬಿಸುತ್ತಿದ್ದರು. ಮೊದಲನೆಯ ಮಹಿಳೆ ಉಳಿದಿಬ್ಬರಲ್ಲಿ ತನ್ನ ಮಗನನ್ನು ತೋರಿಸಿ  ತನ್ನ ಮಗ ಆಂಗ್ಲಮಾಧ್ಯಮದಲ್ಲಿ ಓದುತ್ತಿದ್ದಾನೆ ಎಂದು ಹೇಳುತ್ತಾಳೆ. ಎರಡನೆಯವಳು ತನ್ನ ಮಗ ಸಿಬಿಎಸ್‌ಇಯಲ್ಲಿ ಓದುತ್ತಿದ್ದಾನೆ ಎಂದು ಹೇಳುತ್ತಾಳೆ. ಆಗ ಒಬ್ಬ ಹುಡುಗ ತಾಯಿಯ ಬಳಿ ಇರುವ ನೀರಿನ ಕೊಡವನ್ನು ತೆಗೆದುಕೊಂಡು ಬಾ ಅಮ್ಮಾ ಮನೆಗೆ ಹೋಗೋಣ ಎಂದು ಹೇಳುತ್ತಾನೆ. ಆಗ ಮೂರನೇ ಮಹಿಳೆ ಅತ್ಯಾನಂದದಿಂದ ಇವನೇ ನನ್ನ ಮಗ ಸರಕಾರಿ ಶಾಲೆಯಲ್ಲಿ ಓದುತ್ತಿದ್ದಾನೆ ಎಂದು ತಲೆಯೆತ್ತಿ ಹೇಳುತ್ತಾಳೆ. ಈ ಕಥೆಯ ನೀತಿ ಏನೆಂದರೆ ಲಕ್ಷಗಟ್ಟಲೆ ಹಣ ಖರ್ಚು ಮಾಡಿದರೂ ಸಂಸ್ಕಾರವನ್ನು ಖರೀದಿ ಮಾಡಲು ಸಾಧ್ಯವಿಲ್ಲ. ಮಣ್ಣಿಗೆ ಸಂಸ್ಕಾರ ಕೊಟ್ಟರೆ ಅದು ಮಡಕೆ ಯಾಗುತ್ತದೆ. ಶಿಲ್ಪಿಯ ಸಂಸ್ಕಾರದಿಂದ ಶಿಲೆಯೂ ಶಂಕರನಾಗುತ್ತಾನೆ.

 

ರಮಾ ಭಟ್‌

ಎಸ್‌ಡಿಎಂ ಕಾಲೇಜು ಹೊನ್ನಾವರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.