ಬಂದ ಅವಕಾಶಗಳನ್ನು ಸದುಪಯೋಗಿಸಿ


Team Udayavani, Jul 18, 2020, 6:34 AM IST

ಬಂದ ಅವಕಾಶಗಳನ್ನು ಸದುಪಯೋಗಿಸಿ

ಅದೊಂದು ಸಮೃದ್ಧವಾದ ಹಳ್ಳಿ. ಫ‌ಲವತ್ತಾದ ಭೂ ಪ್ರದೇಶ, ಪಕ್ಕದಲ್ಲೇ ಹರಿಯುವ ನದಿ, ಆ ಊರಿನ ಗ್ರಾಮ ದೇವತೆಯ ಆರಾಧಿಸುತ್ತ ಎಲ್ಲರೂ ಸುಖದಿಂದಲೇ ಇದ್ದರು. ಹೀಗಿರುವಾಗ ಮಳೆಗಾಲದ ಆರಂಭ. ಧೋ ಎಂದು ಮಳೆ ಸುರಿಯಲಾರಂಭಿಸಿತು. ಜೋರಾದ ಮಳೆಯಿಂದ ನದಿಯ ಹರಿವು ಹೆಚ್ಚಾಗಿ ಪ್ರವಾಹದ ರೂಪ ತಾಳಿತು. ಊರೊಳಗೆ ನೀರು ನುಗ್ಗಲಾರಂಭಿಸಿತು. ಜನರೆಲ್ಲ ಗಾಬರಿಯಿಂದ ಸುರಕ್ಷಿತ ಜಾಗಕ್ಕೆ ತೆರಳಲಾರಂಭಿಸಿದರು.

ಊರಿನ ಜನರೆಲ್ಲ ಸುರಕ್ಷಿತ ಜಾಗಕ್ಕೆ ತೆರಳುತ್ತಿದ್ದರೆ ದೇವಸ್ಥಾನ ಪೂಜಾರಿ ಮಾತ್ರ ಎಲ್ಲಿಗೂ ಹೋಗದೇ ದೇವರ ಪೂಜೆಯಲ್ಲಿ ನಿರತನಾದ. ಆಗ ಒಬ್ಬ ವ್ಯಕ್ತಿ ದೇವಸ್ಥಾನ‌ಕ್ಕೆ ಬಂದು ಪೂಜಾರಿ ಕೋಣೆಗೆ ಹೋಗಿ “ನದಿಯಲ್ಲಿ ಪ್ರವಾಹ ಹೆಚ್ಚಾಗಿ ನೀರು ಗ್ರಾಮಕ್ಕೆ ನುಗ್ಗಿದೆ. ದೇಗುಲವೂ ಇನ್ನೇನು ನೀರಲ್ಲಿ ಮುಳುಗಬಹುದು. ಆದುದರಿಂದ ನೀವು ನಮ್ಮೊಡನೆ ಸುರಕ್ಷಿತ ಜಾಗಕ್ಕೆ ಬರಬೇಕು’ ಎಂದು ವಿನಂತಿಸಿ ಕೊಳ್ಳುತ್ತಾನೆ. ಪೂಜಾರಿ ನಗುತ್ತಾ “ನೀವೆಲ್ಲ ನಾಸ್ತಿಕರು ನನಗೆ ದೇವರ ಮೇಲೆ ಸಂಪೂರ್ಣ ನಂಬಿಕೆ ಇದೆ. ನನ್ನನ್ನು ದೇವರು ಕಾಪಾಡುತ್ತಾನೆ. ನಾನು ಬರುವುದಿಲ್ಲ’ ಎಂದ.

ನಿಧಾನಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಾಗಿ ದೇಗುಲಕ್ಕೆ ನುಗ್ಗುತ್ತದೆ. ಆಗ ಪೂಜಾರಿ ಅಲ್ಲೇ ಇದ್ದ ಎತ್ತರದ ಮೇಜಿನ ಮೇಲೆ ನಿಲ್ಲುತ್ತಾನೆ. ಅದೇ ಸಮಯಕ್ಕೆ ದೇವಸ್ಥಾನದತ್ತ ಒಬ್ಬ ವ್ಯಕ್ತಿ ದೋಣಿಯಲ್ಲಿ ಬಂದು ಪೂಜಾರಿಯನ್ನು ದೋಣಿಯಲ್ಲಿ ಕುಳಿತುಕೊಳ್ಳಿ ಸುರಕ್ಷಿತ ಜಾಗಕ್ಕೆ ಕರೆದೊಯ್ಯುತ್ತೇನೆ ಎಂದು ಆಹ್ವಾನಿಸುತ್ತಾನೆ. ಮೊದಲಿನ ಕಾರಣವನ್ನೇ ನೀಡಿ ಪೂಜಾರಿ ಈ ಸಲವೂ ತಿರಸ್ಕರಿಸುತ್ತಾನೆ. ದೋಣಿ ಹೊರಡುತ್ತದೆ.

ಪ್ರವಾಹ ಇನ್ನೂ ಹೆಚ್ಚಾಗಿ ದೇವಸ್ಥಾನದ ಒಳಂಗಾಣವೆಲ್ಲ ನೀರು ತುಂಬಿತು.ಪೂಜಾರಿ ದೇವಸ್ಥಾನದ ಮಾಳಿಗೆ ಮೇಲೆ ನಿಂತು ಪ್ರಾರ್ಥನೆ ಮುಂದುವರಿಸುತ್ತಾನೆ. ಆಗ ಒಂದು ಹೆಲಿಕಾಪ್ಟರ್‌ ಬಂದು ಅಲ್ಲಿಂದ ವ್ಯಕ್ತಿಯೊಬ್ಬ ಮೆಲೇರಲು ಹಗ್ಗವನ್ನು ಇಳಿಯಬಿಡುತ್ತಾನೆ. ಆದರೆ ಪೂಜಾರಿ ಅದೇ ಕಾರಣವನ್ನೇ ನೀಡಿ ಅವನ ಕರೆಗೆ ಅಸಮ್ಮತಿ ಸೂಚಿಸುತ್ತಾನೆ. ಹೆಲಿಕಾಪ್ಟರ್‌ ಬೇರೆ ಜನರ ರಕ್ಷಣೆಗಾಗಿ ತೆರಳುತ್ತದೆ.

ಇತ್ತ ನೀರಿನ ಮಟ್ಟ ಹೆಚ್ಚಲಾರಂಬಿಸಿತು. ಪೂಜಾರಿ ಭಯಭೀತನಾಗಿ ಮೇಲೆ ನೋಡುತ್ತಾ ಓ ದೇವನೆ ನಾನು ನನ್ನ ಜೀವನದುದ್ದಕ್ಕೂ ನಿನ್ನನ್ನು ಆರಾಧಿಸಿದ್ದೇನೆ. ನಿನ್ನ ಮೇಲೆ ಅಪಾರ ನಂಬಿಕೆ ಇರಿಸಿದ್ದೇನೆ. ರಕ್ಷಿಸಲು ನೀನೇಕೆ ಬರಲಿಲ್ಲ ಎಂದು ಗೋಗರೆಯುತ್ತಾನೆ. ಆಗ ದೇವರ ಅಶ ರೀರ ವಾಣಿಯೊಂದು ಕೇಳುತ್ತದೆ. “ಓ ಮರುಳನೇ ನಾನು ನಿನ್ನ ಬಳಿಗೆ ಗ್ರಾಮಸ್ಥನಾಗಿ ಬಂದು ಸುರಕ್ಷಿತ ಜಾಗಕ್ಕೆ ಆಹ್ವಾನಿಸಿದೆ; ನೀನು ಬರಲಿಲ್ಲ. ಅನಂತರ ದೋಣಿಯಲ್ಲಿ ಮತ್ತು ಹೆಲಿಕಾಪ್ಟರ್‌ನಲ್ಲಿ ಬಂದೆ ಆಗಲೂ ನೀನು ನನ್ನನ್ನು ಗುರುತಿಸಲಿಲ್ಲ. ಇದು ನನ್ನ ತಪ್ಪೇ?’ ಎಂದು. ಆಗ ಪೂಜಾರಿ ತನ್ನ ತಪ್ಪಿಗಾಗಿ ಕ್ಷಮೆಯಾಚಿಸಿದ. ಸುರಕ್ಷಿತ ಜಾಗಕ್ಕೆ ತೆರಳು ಇನ್ನೊಂದು ಅವಕಾಶ ದೊರೆತಾಗ ಅದನ್ನು ಒಪ್ಪಿಕೊಂಡ.

ದೇವರು ಎನ್ನುವುದು ಒಂದು ಅಚಲ ನಂಬಿಕೆ. ನಂಬಿದವರನ್ನು ಆ ಒಂದು ಅಮೂರ್ತ ಶಕ್ತಿ ಎಂದಿಗೂ ಕೈಬಿಡುವುದಿಲ್ಲ. ಆದರೆ ದೇವರೆ ನೇರವಾಗಿ ಬಂದು ಸಹಾಯ ಮಾಡಲಿ ಎನ್ನುವುದು ಮೂರ್ಖತನ. ಹಾಗೆಯೇ ಜೀವನದಲ್ಲಿ ಮುಂದೆ ಬರಲು, ಸಾಧಿಸಲು ದೇವರಿಂದ ನಮಗೆ ಸಾಕಷ್ಟು ಅವಕಾಶಗಳು ದೊರೆಯುತ್ತವೆ. ಆದರೆ ನಾವು ಅದ್ಯಾವುದರ ಸರಿಯಾದ ಮಾರ್ಗವಲ್ಲವೆಂದು ತಿರಸ್ಕರಿಸುತ್ತೇವೆ. ಕೊನೆಗೊಂದು ದಿನ ನನಗೆ ಸರಿಯಾದ ಅವಕಾಶಗಳು ಸಿಗಲಿಲ್ಲ, ನನ್ನ ಗ್ರಹಚಾರ ಸರಿ ಇಲ್ಲ ಎಂದು ದೂರುತ್ತೇವೆ. ಬಂದ ಅವಕಾಶಗಳ ಸದುಪ ಯೋಗ ಮಾಡಿಕೊಂಡರೆ ಜೀವನದಲ್ಲಿ ಯಶಸ್ವಿಯಾಗುತ್ತೇವೆ.

 ನಾಗೇಂದ್ರ ಬಿ. ಹೂವಿನಹಡಗಲಿ, ಉದ್ಯೋಗಿ

ಟಾಪ್ ನ್ಯೂಸ್

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.