ಕತ್ತಲ ಹಾದಿಯಲಿ ಕಾಣದ ಗುರಿಯೆಡೆಗೆ


Team Udayavani, Aug 16, 2020, 4:55 PM IST

walking

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನಾವೀಗ ಕತ್ತಲ ಮುಳ್ಳುದಾರಿಯಲ್ಲಿ ಕಾಣದ ಗುರಿಯೆಡೆಗೆ ನಡೆಯುತ್ತಿದ್ದೇವೆ.

ಇದು ಬಲು ಕಠಿನವೆನಿಸುತ್ತಿದೆ. ಆದರೆ ಇರುವುದು ಇದೊಂದೇ ದಾರಿ.

ಇಲ್ಲಿ ನಾವೆಷ್ಟೇ ಅಲ್ಲ ಅದೆಷ್ಟೋ ಸಂಖ್ಯೆಯ ಸಹಪಯಣಿಗರೂ ಇದ್ದಾರೆ.

ಎಲ್ಲರೂ ಕತ್ತಲ ದಾರಿಯಲ್ಲಿ ಏದುಸಿರು ಬಿಡುತ್ತಾ ಸಾಗುತ್ತಿದ್ದಾರೆ.

ಕಾಲಚಕ್ರ ಮಗ್ಗುಲು ಬದಲಿಸಿದೆ. ಸಾಂಕ್ರಾಮಿಕ ರೋಗ, ಪ್ರವಾಹ, ಜತೆಗೇ ಬಂದ ಮತ್ತಷ್ಟು ಸಮಸ್ಯೆಗಳ ಬಲಾಡ್ಯ ಶಕ್ತಿಯನ್ನು ಎದುರಿಸಲಾಗದೆ ನಾವು ಪರಿತಪಿಸುತ್ತಿದ್ದೇವೆ.

ಮಕ್ಕಳು- ಹಿರಿಯರು, ಬಡವ-ಬಲ್ಲಿದ ಎಂಬ ಯಾವ ಭೇದವೂ ಇಲ್ಲದೆ ಎಲ್ಲರೂ ಇಲ್ಲಿ ಸಮಪಾತ್ರರು. ನಡೆದ, ನಡೆಯುತ್ತಿರುವ ಈ ಅಸಾಧ್ಯ ಆಕ್ರಮಣ ನಮ್ಮ ಜೀವನದ ಮೇಲೆ ಮಾತ್ರವಲ್ಲ, ಯೋಚನೆಯ ಮೇಲೆ ಗಾಢ ಪರಿಣಾಮ ಬೀರುತ್ತಿವೆ. ಭರವಸೆಯ ಬಗೆಗೊಂದು ಹೊಸ ಪ್ರಶ್ನೆ ಮೂಡುವಂತೆ ಮಾಡಿದೆ.

ನೆನಪಿರಲಿ, ಬದಲಾವಣೆ ಎಂಬುದು ಲೋಕನಿಯಮ. ಇದು ಸಿಹಿ-ಕಹಿಯ ಸಂಗಮ. ನಮಗೀಗ ಕಹಿ ಘಳಿಗೆ ಎದುರಾಗಿದೆ. ಆದರೆ ಇದೇನೂ ಹೊಸತಲ್ಲ. ಕಾಲಚಕ್ರಕ್ಕೆ ಹೆದರಿದರೆ ನಾವು ಬದುಕಲ್ಲಿ ಸೋತಂತೆ. ಈ ಕ್ಷಣ ಸೋತರೆ, ಭರವಸೆ ಕಳೆದುಕೊಂಡರೆ ಅದು ಸತ್ತಂತೆ. ಸುರಾಸುರರೆನ್ನದೆ ವಿಶಾಲ ಕ್ಷೀರಸಾಗರವೆಂಬ ಬದುಕಿನಲ್ಲಿ ಮಂಥನ ನಡೆಸೋಣ. ಮೊದಲು ವಿಷವೇ ದಕ್ಕಿದರೂ ಕುಗ್ಗದೆ ಅಮೃತ ಬಂದೀತೆಂಬ ಅಚಲ ಭರವಸೆಯೊಂದಿಗೆ ಇಲ್ಲಿ ತನ್ನನ್ನು ತಾನು ನಂಬಿದವನಷ್ಟೇ ಬಾಳಿಯಾನು.

ಇಲ್ಲಿ ಯಾರ ಸಹಾಯದ ನಿರೀಕ್ಷೆಯೂ ಬೇಡ. ಯಾರನ್ನೂ ಕಾಯುವ ಪ್ರಮೇಯವಿಲ್ಲ. ಜಗ ನಿಯಮದನುಸಾರ ಹೊಸ ರೀತಿಯಲ್ಲಿ ಬದುಕಲು ಕಲಿಯಬೇಕಷ್ಟೇ.

ಆಧುನಿಕ ಜಗತ್ತಿನ ಹೊಸ ವೇಷದಲ್ಲಿ ನಾವೂ ಪಾತ್ರಧಾರಿಗಳಾಗುವುದು ಇಲ್ಲಿ ಆಯ್ಕೆಯಲ್ಲ; ಅನಿವಾರ್ಯ. ಕಷ್ಟದ ಹಾದಿಯಲ್ಲಿ ಮುಳ್ಳು ಚುಚ್ಚಿದರೂ, ಸೋತೇನೆಂಬ ಭಯ ಕಾಡಿದರೂ ತಾಳ್ಮೆಯಿರಲಿ. ನಮ್ಮ ಮೇಲೆ ಪ್ರೀತಿಯಿಟ್ಟಿರುವವರ ಮೇಲೆ ಪ್ರೀತಿ, ನಂಬಿಕೆಯಿರಲಿ. ನಮ್ಮ ಜವಾಬ್ದಾರಿಗಳ ಬಗೆಗೆ ಬದ್ಧತೆಯಿರಲಿ.

ಒಮ್ಮೆಯಷ್ಟೇ ದೊರೆಯುವ ಈ ಜೀವನ ಎಷ್ಟೊಂದು ಅದ್ಭುತ. ಇದು ಬಯಸದೇ ಎಲ್ಲವನ್ನೂ ಕೊಡುತ್ತದೆ. ಅತಿಯಾಸೆ, ಅದರಿಂದ ಮೂಡುವ ಕೊರಗನ್ನು ತೊರೆದು ಜೀವನವನ್ನು ಪ್ರೀತಿಸೋಣ. ನಮ್ಮನ್ನು ನಾವು ಪ್ರೀತಿಸೋಣ. ಕಠಿನ ಪರಿಸ್ಥಿತಿಯಲ್ಲಿ ಕುಗ್ಗದೆ, ಮುಂದೆ ನಡೆಯಬಲ್ಲ ನಮ್ಮ ಸಾಮರ್ಥ್ಯದ ಅರಿವಿರಲಿ. ಒಮ್ಮೆಯಷ್ಟೇ ಬರುವ ಈ ಜೀವನದ ಕಡೆಗೆ ಎಂದೂ ಮಸುಕಾಗದ ಭರವಸೆಯಿರಲಿ. ಮನುಷ್ಯರಾಗಿ ಎಲ್ಲ ಪ್ರೀತಿ ವಿಶ್ವಾಸಗಳನ್ನು ಮರೆತು, ನಮ್ಮವರನ್ನು ತೊರೆದು, ಕೊರಗಿ ಅಲ್ಪರಾಗಿ ಸಾಯದಿರೋಣ.

ಈ ಕಷ್ಟದ ಹಾದಿಯಲ್ಲಿ ಗುರಿಯೆಡೆಗೆ ಮಾತ್ರ ಗಮನಹರಿಸದೆ, ಸವೆಸಿದ ಹಾದಿ ಕಲಿಸಿದ ಪಾಠ ಮರೆಯದಿರಲಿ. ನಮ್ಮ ದುರಾಸೆಗೆ ಪ್ರತಿಯಾಗಿ ಪ್ರಕೃತಿ ತೋರಿದ ಮುನಿಸು ಮುಂದೆಂದಿಗೂ ನೆನಪಿರಲಿ. ಈ ಭುವಿಗೆ ನಾವೆಲ್ಲ ಒಡೆಯರು. ನಮ್ಮಷ್ಟೇ ಹಕ್ಕು ಹೊಂದಿರುವ ಸಕಲ ಜೀವಿಗಳ ಬಗ್ಗೆಯೂ ಕರುಣೆಯಿರಲಿ. ಬಡವ, ಶ್ರೀಮಂತ ಎಂಬ ಬಿಮ್ಮು ಬಿಟ್ಟು, ಜಾತಿ- ಧರ್ಮಗಳ ಹಂಗನ್ನು ತೊರೆದು ನಿಜವಾದ ಅರ್ಥದಲ್ಲಿ ಮನುಷ್ಯರಾಗೋಣ. ಎಲ್ಲ ಲೌಕಿಕ ಬಂಧನಗಳಿಂದ ಪ್ರೇರಿತ ಯೋಚನೆಗಳಾದ ಅಹಂಕಾರ, ಬಿಗುಮಾನ, ಸಿಟ್ಟು ಸೆಡರುಗಳನ್ನು ಬದಿಗಿಟ್ಟು ನಿಜಾರ್ಥದಲ್ಲಿ ಸ್ವತಂತ್ರರಾಗಿ.

ಸಿರಿತನ, ಆಡಂಬರಗಳಿಂದ ಮುಕ್ತವಾಗಿ ದೀನರಾಗಿ ಸಾಗೋಣ ಕಾಣದ ಗುರಿಯೆಡೆಗೆ. ನೆನಪಿರಲಿ, ನಮ್ಮ ದೇಹವೆಂಬ ಗುಡಿಯೊಳಗೆ ಭರವಸೆಯೇ ನಂದಾದೀಪವಾಗಿರಲಿ.

ಗುರುಪ್ರಸಾದ್‌ ಟಿ. ಎನ್‌., ಉಪನ್ಯಾಸಕ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.