‘ಸೃಜನಾತ್ಮಕತೆಯೂ ಸದ್ವಿನಿಯೋಗವಾಗಲಿ’


Team Udayavani, Jun 17, 2020, 1:00 AM IST

Creativity

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಗವಂತ ಎಲ್ಲದರ ಸೃಷ್ಟಿಕರ್ತ. ನಮ್ಮ ಹುಟ್ಟು ಕೂಡ ಆತನ ದೃಷ್ಟಿಯಲ್ಲಿ ಆದದ್ದು.

ಸೃಷ್ಟಿಸುವ ಜತೆಗೆ ಸೃಜನಶೀಲತೆ ಎಂಬ ವರವನ್ನು ಆತ ನಮಗೆ ಬಳುವಳಿಯಾಗಿ ನೀಡಿದ್ದಾನೆ. ಆದರೆ ಎಲ್ಲದರಲ್ಲೂ ಪರಿಪೂರ್ಣತೆಯ ಬೆನ್ನತ್ತಿರುವ ನಾವು ಒಂದೆಡೆಯಿಂದ ನಮ್ಮತನವನ್ನೆ ಕಳೆದುಕೊಳ್ಳುತ್ತಿದ್ದೇವೆ. ಇದೇ ನಮ್ಮಲ್ಲಿನ ಉತ್ಸಾಹ ಕುಗ್ಗಲು ಪ್ರಮುಖ ಕಾರಣ.

ನಮ್ಮಲ್ಲಿನ ಸೃಜನಶೀಲತೆಯ ಅರಿವೇ ನಮಗಿಲ್ಲದ ಕಾರಣ ಎಲ್ಲದರಲ್ಲೂ ಅಪೂರ್ಣತೆಯ ಭಾವ, ಪ್ರತಿಯೊಂದಕ್ಕೂ ಕಿರುಚಾಟ, ಅರೆಬರೆ ಕೆಲಸ ಇವೆಲ್ಲವೂ ನೋಡುಗರಿಗೆ ನಿಮ್ಮ ಸೃಜನಾತ್ಮಕತೆ ಎಷ್ಟಿದೆ ಎಂಬ ಪ್ರಶ್ನೆ ಹುಟ್ಟಲು ಕಾರಣವಾಗುತ್ತದೆ.

ನಾನು ಒಂಟಿಯಲ್ಲ, ಜಗತ್ತೇ ನನ್ನಜತೆ ಇದೆ ಎಂಬ ಭಾವ ನಮ್ಮಲ್ಲಿರಬೇಕು. ಭಗವಂತ ನೀಡಿದ ಸೃಜನಾತ್ಮಕತೆಯ ಸದ್ವಿನಿಯೋಗ ಆಗಬೇಕು. ಅದಾದಾಗ ಮಾತ್ರ ನಾವು ಮತ್ತು ನಮ್ಮ ಕೆಲಸಗಳೆರಡೂ ಪರಿಪೂರ್ಣವಾಗಲು ಸಾಧ್ಯ.

ನಿಮ್ಮ ಮನಸ್ಸು ಗೃಹಿಸುವಷ್ಟು ಪರಿಪೂರ್ಣತೆಯನ್ನು ನೀವು ಸಾಧಿಸುವುದು ಸಾಧ್ಯವಿಲ್ಲ. ಪತ್ರಿಕೆ ಓದಿದ ಬಳಿಕ ಅತವಾ ಸಿನೆಮಾ ನೋಡಿದ ಬಳಿಕ ನಿಮಗೆ ಇನ್ನೂ ಏನೋ ಇಲ್ಲಿ ಬೇಕಿತ್ತು ಎಂದು ಎನಿಸಿಯೇ ಎನಿಸುತ್ತದೆ. ಇದರಂತೆಯೇ ನಿಮ್ಮ ಕೆಲಸಗಳೂ ಕೂಡ. ನೆನಪಿಡಿ ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ.

ಸೋಲನ್ನು ಸಂಭ್ರಮಿಸಿ
ಸೋತ ಮಾತ್ರಕ್ಕೆ ಜೀವನ ಮುಗಿಯಲಿಲ್ಲ. ಪ್ರತೀ ಅಂತ್ಯವೂ ಹೊಸ ಆರಂಭಕ್ಕೆ ಬುನಾದಿ. ಸೋಲು ನಿಮ್ಮ ಮುಂದಿನ ಗೆಲುವಿಗೆ ಪಾಠವಾಗಬೇಕೇ ಹೊರತು ಅಡ್ಡಿಯಾಗಬಾರದು. ಹೀಗಾಗಿಯೇ ಸೋಲನ್ನು ಸಂಭ್ರಮಿಸಲು ಕಲಿಯಿರಿ.

ಭಗವಂತನ ಅನುಗ್ರಹವಿಲ್ಲದೆ ಹುಲ್ಲು ಕಡ್ಡಿಯೂ ಹಂದಾಡದು ಎಂಬ ಮಾತಿದೆ. ಹೀಗಾಗಿ ಶಕ್ತಿ ಮೀರಿ ಪ್ರತಿಯೊಂದನ್ನೂ ಪ್ರಯತ್ನಿಸಿ. ಫ‌ಲಾಫ‌ಲವನ್ನು ಭಗವಂತನ ಅನುಗ್ರಹಕ್ಕೆ ಬಿಟ್ಟುಬಿಡಿ. ಒಂದೊಮ್ಮೆ ನೀವು ಸೋತರೆ ಭಗವಂತನ ಅನುಗ್ರಹ ನಿಮ್ಮ ಮೇಲಿಲ್ಲ ಎಂದಲ್ಲ. ಬದಲಾಗಿ ಇದಕ್ಕಿಂತ ದೊಡ್ಡ ಅವಕಾಶವನ್ನು ಭಗವಂತ ನಿಮಗಾಗಿ ನೀಡಲಿದ್ದಾನೆ ಎಂದತರ್ಥ.

ನಿಮ್ಮನ್ನು ನೀವೇ ಕ್ಷಮಿಸಿ
ತಪ್ಪುಗಳಾದಾಗ ಅಥವಾ ನಿಮ್ಮ ಪ್ರಯತ್ನದಲ್ಲಿ ಸೋಲುಂಡಾಗ ನಿಮ್ಮನ್ನು ನೀವೇ ಕ್ಷಮಿಸುವ ಅಭ್ಯಾಸ ಮಾಡಕೊಳ್ಳಿ. ಒಮ್ಮೆ ಜೋರಾಗಿ ನಕ್ಕು ನಿಮ್ಮ ನೋವು ಮರೆತುಬಿಡಿ. ಸೋಲುಗಳು ಸಾಧನೆಯ ಹಾದಿಯಲ್ಲಿ ಸಿಗುವ ಹಂತಗಳಷ್ಟೆ. ಇವೇ ನಮ್ಮ ಮುಂದಿನ ಗೆಲುವಿಗಾಗಿ ನಡೆದಿರುವ ತಾಲೀಮುಗಳು ಎಂದು ಭಾವಿಸಿ. ಉತ್ತಮವಾಗಿ ಕೆಲಸ ಮಾಡಲಾಗದಿದ್ದರೆ ಬಿಡಿ, ಮುಂದೆ ಅತ್ಯುತ್ತಮವಾಗಿ ಕೆಲಸ ಮಾಡುವ ಸಂಕಲ್ಪ ತೊಡೋಣ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.