UV Fusion: ಕಾಣೆಯಾಗಿದ್ದಾರೆ!


Team Udayavani, Sep 11, 2023, 9:07 AM IST

3-uv-fusion

ಅದೊಂದು ಕಾಲವಿತ್ತು ಚಳಿಗಾಲ, ಬೇಸಿಗೆಗಾಲ, ಮಳೆಗಾಲವೆಂಬ ಮೂರು ಕಾಲಗಳಿದ್ದವು. ಆದರೆ ಕಳೆದ ಒಂದೆರಡು ವರ್ಷಗಳಿಂದ ಯಾವ ಯಾವ ಕಾಲಗಳು ಯಾವಾಗ ಶುರುವಾಗುತ್ತವೆ ಮುಗಿಯುತ್ತವೆ ಎಂದೇ ತಿಳಿಯುತ್ತಿಲ್ಲ. ಯಾಕೋ ಈ ಬಾರಿ ಸೂರ್ಯದೇವ ನಮ್ಮ ಮೇಲೆ ಮುನಿಸಿಕೊಂಡಂತಿದೆ. ತನ್ನ ಸಂಗಡಿಗ ವರುಣ ದೇವನಿಗೆ ಕೆಲಸಕ್ಕೆ ಹಾಜರಾಗಲು ಅನುಮತಿಯೇ ಕೊಡುವುದಿಲ್ಲ ಎಂದು ಟೊಂಕ ಕಟ್ಟಿ ನಿಂತಂತಿದೆ.

ಅಯ್ಯೋ ಬಿಸಿಲ ಬೇಗೆ ತಾಳಲಾಗುತ್ತಿಲ್ಲ. ಮುಖ ತೋರಿಸಿ ಹೋದ ಮಳೆರಾಯ ಅಬ್ಟಾ ಎಂಥಾ ಮಳೆ ಎನ್ನುವುದರೊಳಗೆ ಮುಖ ತಿರುಗಿಸಿ ನಿಂತಾಗಿದೆ. ಕೆಲವೊಂದು ಕಡೆ ಆಗಲೇ ನೀರಿಗೂ ಹಾಹಾಕಾರ ಎದ್ದಿದೆ. ವರುಣದೇವನೇ ಎಲ್ಲಿಗೆ ಕಾಣೆಯಾಗಿದ್ದೀರಿ? ನಿಮ್ಮ ಇರುವಿಕೆಯನ್ನು ಒಮ್ಮೆ ನಮಗೆ ತೋರ್ಪಡಿಸುವಿರಾ ದಿನಕ್ಕೊಮ್ಮೆಯಾದರೂ ಬಂದು ನಮ್ಮನ್ನು ನೋಡಿ ಹೋಗಿ. ನಮ್ಮ ಮೇಲೆ ಯಾಕೆ ಇಷ್ಟು ಕೋಪ ನಿಮಗೆ?!

ನನಗ್ಯಾಕೋ ಈ ವರ್ಷ ಬೇಸಿಗೆಯಲ್ಲಿರಬೇಕಾದ ಬಿಸಿಲು- ಶಾಖ ನಮ್ಮನ್ನು ಬಿಟ್ಟು ಹೋಗುವ ಹಾಗೆ ಕಾಣಿಸುತ್ತಿಲ್ಲ. ಈ ಭೂಮಿ ದೋಸೆ ಮಾಡಲು ಸಿದ್ಧವಾದ ಖಾದ ಹಂಚಿನ ತರಹ ಆಗಿದೆ. ಹಂಚು ಕಾದಿದೆಯೋ ಎಂದು ನೋಡಲು ಹಂಚಿನ ಮೇಲೆ ನೀರು ಚಿಮಿಕಿಸುವ ಹಾಗೆ ವರುಣದೇವರು ಆಗಾಗ ಬಂದು ಹೋಗುತ್ತಿದ್ದಾರೆ ಅಷ್ಟೇ. ಜೊತೆಗೆ ಈ ಮಳೆ- ಬಿಸಿಲಿನ ಕಣ್ಣಾಮುಚ್ಚಾಲೆಯಲ್ಲಿ ಜನರ ಆರೋಗ್ಯದ ಸ್ಥಿತಿ ದೇವರಿಗೇ ಪ್ರೀತಿ.

ತೈಲದ ಬೆಲೆ ಗಗನಮುಖಿಯಾಗಿದೆ. ಇನ್ನು ನೀರಿನ ಬೆಲೆಯೂ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಭೂ ತಾಯಿಯ ಒಡಲನ್ನು ಬಗೆದು, ತೆಗೆಯುವಷ್ಟು ನೀರನ್ನು ತೆಗೆಯಬಹುದು ಅಷ್ಟೇ, ಇನ್ನೆಷ್ಟು ನೀರನ್ನು ತೆಗೆಯಬಹುದು ಹೇಳಿ ಭೂದೇವಿಯ ಒಡಲನ್ನು ತಂಪುಮಾಡಲು ವರುಣದೇವನಿಂದ ಮಾತ್ರ ಸಾಧ್ಯ. ಅವನು ಮನಸ್ಸು ಮಾಡಬೇಕು ಅಷ್ಟೇ. ಈ ವರುಣ ದೇವರೋ ಎಲ್ಲಿಗೆ ಕಾಣೆಯಾಗಿದ್ದಾನೆ ಎಂದು ತಿಳಿಯುತ್ತಿಲ್ಲ. ಅವನನ್ನು ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ಘೋಷಿಸುವುದೊಂದು ಬಾಕಿ!

 ರಂಜಿತ್‌ ರೈ ಬಂಟ್ವಾಳ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.