UV Fusion: ಅಯೋಧ್ಯೆ ಎಂಬ ಮೋಕ್ಷನಗರಿ


Team Udayavani, Jan 25, 2024, 8:00 AM IST

7-ayodhya

ಸರಯೂ ನದಿ ತೀರದಲ್ಲಿ ಸಮೃದ್ಧ ಹಾಗೂ ಸಂತುಷ್ಟವಾಗಿಯೂ ಇದ್ದ ದೇಶ ಕೋಸಲ. ಈ ದೇಶಕ್ಕೆ ರಾಜಧಾನಿ ಮೂರು ಲೋಕಕ್ಕೂ ಪ್ರಸಿದ್ಧಿಯಾದ ಅಯೋಧ್ಯೆ. ಸಾಕೇತ ನಗರಿಯೆಂದೂ ಪ್ರಸಿದ್ಧ. ಇಂತಹ ಲೋಕವಿಶ್ರುತ ಅಯೋಧ್ಯಾ ನಗರಿಯು ಹನ್ನೆರಡು ಯೋಜನ ಉದ್ದ, ಮೂರು ಯೋಜನ ಅಗಲದ ನಗರ ರಚನೆಯಂತೆ. ಮಾನವೇಂದ್ರ ವೈವಸ್ವತ ಮನುವಿನಿಂದ ನಿರ್ಮಿತ ನಗರವಿದು. ಅಗಲ ಮತ್ತು ಸಮತಟ್ಟಾದ ಹೆದ್ದಾರಿ. ಹೆದ್ದಾರಿಯ ಅಕ್ಕಪಕ್ಕ ಸುಗಂಧ ಭರಿತ ಸಾಲು ಮರಗಳು. ದಾರಿಗೆ ಬಿದ್ದ ಹೂವುಗಳು ಕಂಪು ಸೂಸಿ ಮಾರ್ಗವನ್ನೂ ಆಹ್ಲಾದಮಯವನ್ನಾಗಿ ಮಾಡುವವು. ಪಟ್ಟಣವು ಅಷ್ಟಾಪದ ಅಂದರೆ ಪಗಡೆಯ ಹಾಸಿನಂತೆ ಎಂಟು ಮೂಲೆಗಳಲ್ಲಿ ಭವ್ಯವಾಗಿತ್ತು.

ಕುವೆಂಪು ಸೊಲ್ಲಲ್ಲಿ “ತೆಂಕಲೊಳಲ್ಲಿಗನತಿದೂರಂ ದೇಶ ಕೋಸಲಮಿಹುದು ಧನ ಧಾನ್ಯ ಜನ ತುಂಬಿ ಸರಯೂ ನದಿಯ ಮೇಲೆ’ ಎಂಬುವುದು ಕೋಸಲದ ವರ್ಣನೆ. ವಿಶಾಲ ರಾಜಬೀದಿಗಳು ಇದ್ದಂತೆ ಅಗಲವಾದ ಭತ್ತದ ಗದ್ದೆಗಳೂ ಇದ್ದವು. ಕದ- ಹೆಬ್ಟಾಗಿಲುಳ್ಳ, ನಡು ಅಂಕಣದ ಉಪ್ಪರಿಗೆಗಳುಳ್ಳ ಕಟ್ಟಡಗಳು ವ್ಯವಸ್ಥಿತವಾಗಿದ್ದವು. ಮಹಡಿಮನೆಗಳ ಮೇಲೆ ಧ್ವಜ-ಪತಾಕೆಗಳು ಹಾರಾಡುತ್ತಿದ್ದವು. ಸ್ವತಂತ್ರವಾದ ಅಂಗಡಿಗಳು, ನಾನಾ ನಮೂನೆಯಲ್ಲಿ ಜೋಡಿಸಿಟ್ಟ ವಸ್ತುಗಳು ಮತ್ತು ಈ ಪದಾರ್ಥಗಳ ವಿಕ್ರಯಕ್ಕೆ ನಾನಾ ದೇಶದ ವ್ಯಾಪಾರಿಗಳು ಒಟ್ಟುಗೂಡುತ್ತಿದ್ದರು. ಅಯೋಧ್ಯಾನಗರದ ನಿವಾಸಗಳು ಬಹು ಮನೋಹರವಾಗಿದ್ದವು. ನಗರಿಯು ಸಮನೆಲದಲ್ಲಿ ನಿರ್ಮಿತವಾಗಿತ್ತು. ಪಟ್ಟಣಿಗರ ಮನೆಗಳೂ ನಿಬಿಡವಾಗಿದ್ದವು. ನೀರು ಕಬ್ಬಿಣ ಹಾಲಿನಷ್ಟೇ ರುಚಿ. ಪಟ್ಟಣದ ಎಲ್ಲೆಡೆ ಭೇರಿ-ವೀಣೆ-ಮದ್ದಳೆ-ಮೃ ದಂಗಗಳ ನಿನಾದಗಳು ಕೇಳಿಬರುತ್ತಿತ್ತು. ಹೀಗಾಗಿ ಜನರು ಯಾವತ್ತೂ ಆನಂದಭರಿತರಾಗಿಯೇ ಇರುತ್ತಿದ್ದರು.

ಅಯೋಧ್ಯೆಯನ್ನು ಆಳಿದ ಇಕ್ಷ್ವಾಕು ವಂಶದ ರಾಜರುಗಳಿಂದಾಗಿ ಜನರು ನಿತ್ಯ ಸಂತೋಷಿಗಳು, ಧರ್ಮಾತ್ಮರು, ಸ್ವಕರ್ಮಶೂರರು, ಕಷ್ಟಸಹಿಷ್ಣುಗಳು, ದಾನಶೀಲರಾಗಿಯೂ ಮತ್ತು ಜಿತೇಂದ್ರಿಯರೂ ಆಗಿದ್ದರು. ಕರ್ಣಾಭರಣ, ಶಿರಸ್ತ್ರಾಣ, ರತ್ನಮಾಲೆಗಳನ್ನೆಲ್ಲಾ ಪ್ರಜೆಗಳು ಧರಿಸುತ್ತಿದ್ದರು. ಜನರು ದೀರ್ಘಾಯುಷ್ಯವುಳ್ಳವರಾಗಿದ್ದರು. ವಿಶೇಷವಾಗಿ ಕಟ್ಟಿದ ವಿಮಾನವೆಂಬ ರಾಜಗೃಹಗಳು, ಬೀದಿಗೆ ನೆರಳು ಬೀರುವ ಮಹಡಿ ಮನೆಯ ಸಾಲು, ಧನಧಾನ್ಯಾದಿ ಸಮಸ್ತ ವಸ್ತು ಸಂಗ್ರಹದಿಂದ ಅಯೋಧ್ಯೆ ಸಮೃದ್ಧವಾಗಿತ್ತು.

ಅಯೋಧ್ಯೆಯ ಸುತ್ತ ದುರ್ಗಗಳು, ಅಭೇದ್ಯವಾದ ಕೋಟೆ, ಕೆಳಗೆ ಕೊತ್ತಲು ಮತ್ತು ಕೋಟೆಯೊಳಗೆ ಶತ್ರು ವಿನಾಶಕ್ಕೆ ಶತಘ್ನಿಗಳೆಂಬ ಯಂತ್ರಗಳೂ ಸಿದ್ಧವಾಗಿರುತ್ತಿದ್ದವು. ಕೋಸಲದ ಅಶ್ವಸೇನೆ ಮತ್ತು ಗಜಪಡೆಗೆ ಸಮನಾದ ಸ್ಫರ್ಧೆ ಯಾರಿಂದಲೂ ಸಾಧ್ಯವಿರಲಿಲ್ಲ.

ಹೇಗೆ ಸಿಂಹವಿರುವ ಗುಹೆಯನ್ನು ಹೊರಗಡೆ ನಿಂತು ಯಾರೂ ಕಾವಲುಕಾಯಬೇಕಾಗಿಲ್ಲವೋ, ಹಾಗೆಯೇ ಮಹಾಪರಾಕ್ರಮಿಗಳಾದ ಯೋಧರಿರುವರೆಂದು ಅಯೋಧ್ಯಾನಗರದ ಸಮೀಪಕ್ಕೂ ಶತ್ರುಗಳು ಧಾವಿಸುತ್ತಿರಲಿಲ್ಲ. ಹಾಗಾಗಿ ಅಯೋಧ್ಯೆಯು ಅಭೇದ್ಯ ನಗರ. ಅಯೋಧ್ಯೆ ಎಂಬ ಹೆಸರಿಗೂ ಇದೇ ಕಾರಣ. ಮತಾಂಧರ ದಾಳಿಗೆ ಸಿಕ್ಕಿ ಕಗ್ಗಂಟಾಗುವ ಮೊದಲು ಅಯೋಧ್ಯೆಯ ನೆಲವು ಯಾವ ಯುದ್ಧಕ್ಕೂ ಸಾಕ್ಷಿಯಾಗಿಲ್ಲ. ವಾಲ್ಮೀಕಿ ರಾಮಾಯಣದ ಅಯೋಧ್ಯೆಯ ವಿವರಣೆ ಕಣ್ಣಿಗೆ ಕಟ್ಟುವಷ್ಟು ಸುಲಲಿತ ಮತ್ತು ಅವರ್ಣನೀಯ.

ಅಯೋಧ್ಯೆಯು ಸಪ್ತ ಮೋಕ್ಷಪುರಿಗಳಲ್ಲೂ ಹೆಸರಿಸಲ್ಪಟ್ಟ ಪುಣ್ಯನಗರಿ, ರಘುವಂಶದ ರಾಜಧಾನಿ. ರಾಮಚರಿತ ಮಾನಸದ ಬಾಲಕಾಂಡದಲ್ಲಿ, ಗೋಸ್ವಾಮಿ ತುಳಸೀದಾಸರು ರಾಮನ ಅಯೋಧ್ಯೆಯು ಭೂಮಂಡಲದ ಸರ್ವೋಚ್ಚ ವಾಸಸ್ಥಾನ ಮತ್ತು ಮೋಕ್ಷವನ್ನು ನೀಡುತ್ತದೆ ಎಂದು ಬರೆಯುತ್ತಾರೆ. ಸರಯೂ ನದಿಯಲ್ಲಿ ಸ್ನಾನ ಮಾಡುವುದರಿಂದ ಮಾತ್ರವಲ್ಲ, ಅದನ್ನು ಸ್ಪರ್ಶಿಸುವ ಮತ್ತು ನೋಡುವ ಮೂಲಕವೂ ವ್ಯಕ್ತಿಯ ಎಲ್ಲಾ ಪಾಪಗಳು ನಾಶವಾಗುತ್ತವೆ.

ಉತ್ತರ ಕಾಂಡದಲ್ಲಿ ರಾಮಚಂದ್ರನು ವನವಾಸದಿಂದ ಹಿಂದಿರುಗಿದ ಅನಂತರವೂ ಅಯೋಧ್ಯೆಯನ್ನು ವಿವರಿಸಲಾಗಿದೆ. ಅಯೋಧ್ಯೆಯ ಜನರ ಮನೆಗಳು ಚಿನ್ನ ಮತ್ತು ರತ್ನಗಳಿಂದ ಅಲಂಕರಿಸಲ್ಪಟ್ಟಿತ್ತು. ಮನೆಗಳ ಅಟ್ಟಣಿಗೆಯ ಕಂಬಗಳು ಮತ್ತು ಮಹಡಿಗಳವರೆಗೆ ವರ್ಣರಂಜಿತ ರತ್ನಗಳಿಂದ ರೂಪುಗೊಂಡಿವೆ. ತುಳಸಿಯ ಜತೆಗೆ, ಸಾಧುಗಳು ಸರಯೂ ನದಿಯ ದಡದಲ್ಲಿ ತುಳಸಿಯೊಂದಿಗೆ ಅನೇಕ ಮರಗಳನ್ನು ನೆಟ್ಟಿದ್ದಾರೆ ಎನ್ನುವ ಅಯೋಧ್ಯೆಯ ಬಣ್ಣನೆಯಿದೆ.

ರಾಮರಾಜ್ಯದ ಅಯೋಧ್ಯೆ, ಅವಧ್‌ ಪ್ರಾಂತ್ಯದ ಮತ್ತು ಈಗಿನ ಜಿಲ್ಲೆಯೂ ಹೌದು. ಅಯೋಧ್ಯೆಯು ಕೊಸಲೇಂದ್ರ ಶ್ರೀರಾಮಚಂದ್ರನ ನಗರಿ. ಪ್ರಾಣಪ್ರತಿಷ್ಠೆಯ ಮೂಲಕ ಸ್ಥಿತವಾಗುವ ಸೀತಾರಾಮನು ಎಲ್ಲರನ್ನೂ ಅನುಗ್ರಹಿಸಲಿ. ಅಯೋಧ್ಯೆಯ ಗತ ವೈಭವ ಪುನಃ ಮೇಳೈಸಲಿ.

-ವಿಶ್ವನಾಥ ಭಟ್‌

ಧಾರವಾಡ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.