ಹೊಸ ಆವಿಷ್ಕಾರಗಳನ್ನು ತರುವಂತಾಗಬೇಕು


Team Udayavani, Aug 15, 2020, 7:45 AM IST

innovations

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನಮ್ಮ ದೇಶವನ್ನು ಅಭಿವೃದ್ಧಿ ಪಥದೆಡೆಗೆ ಕೊಂಡೊಯ್ಯುವಲ್ಲಿ ಯುವಜನತೆಯ ಪಾತ್ರ ಬಹಳ ಹಿರಿದಾಗಿದೆ.

ಯುವಜನರು ಮೊದಲಿಗೆ ದೇಶಾಭಿಮಾನ, ದೇಶಭಕ್ತಿ, ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು.

ಜನರಲ್ಲಿ ರಾಷ್ಟ್ರಾಭಿಮಾನದ ಅರಿವನ್ನು ಮೂಡಿಸಬೇಕು. ಆಗ ಮಾತ್ರ ದೇಶದ ಅಭಿವೃದ್ಧಿಗೆ ಅವರಿಂದ ಕೊಡುಗೆ ಲಭಿಸಲು ಸಾಧ್ಯ.

ದೇಶದಲ್ಲಿ ಕಲಿತ ಪ್ರತಿಭಾವಂತ ಸುಶಿಕ್ಷಿತರು ವಿದೇಶಿ ವ್ಯಾಮೋಹವನ್ನು ತ್ಯಜಿಸಿ ಸ್ವದೇಶದತ್ತ ತಮ್ಮ ಚಿತ್ತವನ್ನು ಹರಿಸಬೇಕು.

ನಿರುದ್ಯೋಗದ ಸಮಯದಲ್ಲಿ ತಮ್ಮದೇ ಆದ ರೀತಿಯಲ್ಲಿ ಉದ್ಯೋಗಗಳನ್ನು ಸೃಷ್ಟಿಸಿಕೊಳ್ಳುವ ಜತೆಗೆ, ತಮಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಹೊಸ ಆವಿಷ್ಕಾರಗಳನ್ನು ತರುವಂತಾಗಬೇಕು. ತಮ್ಮ ಸುತ್ತಮುತ್ತಲಿನ ಕುಂದು-ಕೊರತೆಗಳನ್ನು ಸರಕಾರದ ಗಮನಕ್ಕೆ ತಂದು ಪರಿಹರಿಸಿ, ಅದರಿಂದ ಜನರಿಗೆ ಒಳಿತು ಮಾಡಲು ಸಹಕಾರ ನೀಡಬೇಕು.

ಇಂದಿನ ದಿನಗಳಲ್ಲಂತೂ ಯುವ ಪೀಳಿಗೆಯು ಇಂಟರ್ನೆಟ್‌, ಸೋಶಿಯಲ್‌ ಮೀಡಿಯಾ ಎಂಬ ಮಾಯಾಜಾಲದ ಸುಳಿಗೆ ಸಿಕ್ಕಿ ತಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿದೆ. ಇದು ಬದಲಾಗಬೇಕು. ವ್ಯರ್ಥ ಕಾಲಹರಣ ಮಾಡದೆ ತಮಗೆ ಸಿಗುವ ಸಮಯದ ಸದುಪಯೋಗ ಮಾಡಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವಂತಹ ಕೆಲಸಗಳನ್ನು ಮಾಡಬೇಕು.

ಸಾಮಾಜಿಕ, ಸಾಂಸ್ಕೃತಿಕ, ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿ ತಮ್ಮಿಂದಾಗುವ ಮಟ್ಟಿಗೆ ಜನರಿಗೆ ನೆರವಾಗಬೇಕು.
ಭ್ರಷ್ಟಾಚಾರ, ಆಡಳಿತದಲ್ಲಿನ ಅವ್ಯವಸ್ಥೆ, ಅಕ್ರಮಗಳು, ಹಗರಣಗಳು, ದೇಶದ್ರೋಹಿ ಕಾರ್ಯಚಟುವಟಿಕೆಗಳು ಇವುಗಳೆಲ್ಲದರ ವಿರುದ್ಧ ಧ್ವನಿ ಎತ್ತಬೇಕು. ಜಾತಿ, ಧರ್ಮ, ಭಾಷೆ, ಪ್ರಾಂತ್ಯ ಎಂದು ತಮ್ಮ ತಮ್ಮಲ್ಲೇ ಹೊಡೆದಾಡದೆ, ಏಕತಾ ಮನೋಭಾವ ಹಾಗೂ ಸೌಹಾರ್ದವನ್ನು ಎತ್ತಿ ಹಿಡಿಯಬೇಕು. ಹಳ್ಳಿಗಳಲ್ಲಿನ ಅನಕ್ಷರತೆಯನ್ನು ಹೋಗಲಾಡಿಸಲು ಜನರಲ್ಲಿ ಶಿಕ್ಷಣದ ಬಗೆಗಿನ ಅರಿವನ್ನು ಮೂಡಿಸಿ ಅವರನ್ನು ಕೂಡ ಸುಶಿಕ್ಷಿತರನ್ನಾಗಿ ಮಾಡುವಲ್ಲಿ ಸಹಕರಿಸಬೇಕು.

ಯುವಜನತೆಯು ಸಾಂಸ್ಕೃತಿಕ, ಸಾಮಾಜಿಕ, ಕೃಷಿ, ವಿಜ್ಞಾನ, ವೈದ್ಯಕೀಯ, ಆರ್ಥಿಕ ಮುಂತಾದ ಕ್ಷೇತ್ರಗಳಿಗೆ ತಮ್ಮ ಕೊಡುಗೆಗಳನ್ನು ನೀಡಬೇಕು. ಅದು ಇತರ ಯುವಕರಿಗೆ ಮಾದರಿಯಾಗಿರಬೇಕು.

ಯುವಕರು ಉತ್ತಮ ಆಡಳಿತ ವ್ಯವಸ್ಥೆಗೆ ನಿಷ್ಪಕ್ಷಪಾತವಾಗಿ ಸದಾ ಬೆಂಬಲಿಸಬೇಕು.ಗಡಿ ಕಾಯುವ ಯೋಧನಿಗಿರುವ ಆತ್ಮಸ್ಥೈರ್ಯವು ಗಡಿಯೊಳಗಿರುವ ಪ್ರತಿಯೊಬ್ಬ ಯುವಕರಲ್ಲಿಯೂ ಹೊರಹೊಮ್ಮಬೇಕು. ಸದಾ ದೇಶದಲ್ಲಿನ ಆಗುಹೋಗುಗಳನ್ನು ಗಮನಿಸುತ್ತಿರಬೇಕು. ಯಾವುದೇ ತುರ್ತು ಸಮಯದಲ್ಲಿಯೂ ತಮ್ಮಿಂದಾದ ಮಟ್ಟಿಗೆ ಜನರಿಗೆ ಸಹಕಾರ ನೀಡಬೇಕು. ದೇಶದ ಯುವಜನತೆಯು ಒಮ್ಮತದಿಂದ ರಾಷ್ಟ್ರದ ಅಭಿವೃದ್ಧಿಗೆ ದುಡಿದರೆ ಖಂಡಿತ ಗೆಲುವು ಸಾಧ್ಯ.

ದೇಶ ಎಂದು ಹೇಳುವಾಗ ಅದರಲ್ಲಿ ಹಲವು ಜಾತಿ, ಧರ್ಮ, ಭಾಷೆ, ಪಂಗಡಗಳು, ವಿವಿಧ ಬಗೆಯ ಸಂಸ್ಕೃತಿಗಳು, ಆಚಾರ ವಿಚಾರಗಳು ಇತ್ಯಾದಿಗಳು ಬರುತ್ತವೆ. ಹೀಗಾಗಿ ಏಕತಾಭಾವದಿಂದ ಸಹೃದಯಿಗಳಾಗಿ ಯುವಕರು ದೇಶದ ಅಭಿವೃದ್ಧಿಗಾಗಿ ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು. ಇಂದಿನ ಯುವಕರು ದೃಢಸಂಕಲ್ಪ ಮಾಡಿ ದೇಶಕ್ಕಾಗಿ ಎದ್ದು ನಿಂತರೆ ಅಭಿವೃದ್ಧಿ ಸುಲಭ ಸಾಧ್ಯ.


ಜ್ಯೋತಿ ಮಂಗಳೂರು, ಬೆಸೆಂಟ್‌ ಕಾಲೇಜು

 

 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.