ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ 5.5 ಟನ್ ಅಕ್ಕಿ ವಿತರಣೆ | Udayavani
Team Udayavani, Apr 27, 2020, 11:23 AM IST
ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದೇಶವ್ಯಾಪಿ ಜಾರಿಯಲ್ಲಿರುವ ಲಾಕ್ ಡೌನ್ ನಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿದ್ದು ತೀರಾ ಸಂಕಷ್ಟದಲ್ಲಿರುವ ಕಾಪು ಕ್ಷೇತ್ರದ ಜನರಿಗೆ ಅಕ್ಕಿ ವಿತರಿಸುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಕಾಪು ರಾಜೀವ ಭವನದಲ್ಲಿ ಚಾಲನೆ ನೀಡಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವಲಯದ 11 ಗ್ರಾಮೀಣ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರುಗಳಿಗೆ ಪ್ರಥಮ ಹಂತದಲ್ಲಿ 5.5 ಟನ್ ಅಕ್ಕಿಯನ್ನು ಸಮಾನವಾಗಿ ಹಂಚಲಾಯಿತು.
ಆಯಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನು ಕರೆದು ಹಂಚಲಾದ ಅಕ್ಕಿಯನ್ನು ಆಯಾಯ ಬೂತ್ ಸಮಿತಿಗೆ ಹಂಚುವ ಜವಾಬ್ದಾರಿಯನ್ನು ಅವರಿಗೆ ನೀಡಲಾಯಿತು.
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವೀನಚಂದ್ರ ಸುವರ್ಣ, ಕೆ. ಪಿ.ಸಿ.ಸಿ ಕಾರ್ಯದರ್ಶಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಡಿ. ಸಿ.ಸಿ. ಉಪಾಧ್ಯಕ್ಷರುಗಳಾದ ಕೆ. ದಿವಾಕರ್ ಶೆಟ್ಟಿ, ಕೆ. ಇಬ್ರಾಹಿಂ ಮನಹರ್, ದೀಪಕ್ ಕುಮಾರ್ ಎರ್ಮಾಳ್, ಬ್ಲಾಕ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಅಮೀರ್ ಮೊಹಮ್ಮದ್, ಹರೀಶ್ ನಾಯಕ್ ಹಾಗೂ ವಿವಿಧ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು