K.R. ಮಾರ್ಕೆಟ್ ನಲ್ಲಿ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ
Team Udayavani, Mar 29, 2019, 3:41 PM IST
ಬೆಂಗಳೂರಿನ ಹೆಸರಾಂತ ಕೃಷ್ಣರಾಜೇಂದ್ರ ಮಾರುಕಟ್ಟೆ ಭಾಗದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಅನಧಿಕೃತ ಮಳಿಗೆಗಳ ಬೃಹತ್ ತೆರವು ಕಾರ್ಯಾಚರಣೆ ಶುಕ್ರವಾರದಂದು ನಡೆಯಿತು. ಮಾರುಕಟ್ಟೆ ಸಂಕೀರ್ಣದ ಕೆಳ ಅಂತಸ್ತಿನಲ್ಲಿ ಅನಧಿಕೃತ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿತ್ತು. ಇವುಗಳ ನೆಲಸಮ ಆದೇಶದ ವಿರುದ್ಧ ಸ್ಥಳಿಯರು ಕೋರ್ಟ್ ಮೆಟ್ಟಿಲನ್ನೂ ಏರಿದ್ದರು. ಆದರೆ ಇದೀಗ ರಾಜ್ಯದ ಉಚ್ಛ ನ್ಯಾಯಾಲಯವು ಅನಧಿಕೃತ ಮಳಿಗೆಗಳ ತೆರವಿಗೆ ಆದೇಶ ನೀಡಿರುವುದರಿಂದ ಸ್ಥಳೀಯ ವ್ಯಾಪಾರಸ್ಥರ ವಿರೋಧದ ನಡುವೆಯೂ ಬೆಂಗಳೂರು ಮಹಾನಗರ ಪಾಲಿಕೆಯು ಇವುಗಳ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದೆ. ಬಿಗಿ ಪೊಲೀಸ್ ಭದ್ರತೆಯ ನಡುವೆ ಜೆಸಿಬಿಗಳು, ಲಾರಿ, ಟ್ರ್ಯಾಕ್ಟರ್ ಹಾಗೂ ಕಾರ್ಮಿಕರನ್ನು ಬಳಸಿಕೊಂಡು ಮಹಾನಗರ ಪಾಲಿಕೆಯು ಈ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದೆ.