ಉಳ್ಳೂರು ಬಾವಿಗೆ ಬಿದ್ದ ಕಾಡುಕೋಣ! ಅರಣ್ಯ ಇಲಾಖೆ ಹಾಗೂ ಸ್ಥಳೀಯರಿಂದ ರಕ್ಷಣೆ
Team Udayavani, Jul 11, 2020, 7:37 PM IST
ಸಿದ್ದಾಪುರ : ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡುಕೋಣವೊಂದು ಕುಂದಾಪುರ ತಾಲೂಕಿನ ಉಳ್ಳೂರು 74 ಗ್ರಾಮದ ಶಿವರಾಮ ಶೆಟ್ಟಿ ಎಂಬವರ ಕೃಷಿ ತೋಟದ ಬಾವಿಗೆ ಬಿದ್ದು ಮೇಲೆ ಬರಲಾಗದೆ ಒದ್ದಾಡುತ್ತಿದ್ದುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ 10 ಅಡಿ ಆಳದ ಬಾವಿಯನ್ನು ಜೆಸಿಬಿ ಯಂತ್ರದ ಮೂಲಕ ಕಾಲುವೆ ಕೊರೆದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ರಕ್ಷಿಸಲಾಯಿತು.