COVID-19 ನಿರ್ವಹಿಸಲು ದ.ಕ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ
Team Udayavani, Jul 23, 2020, 9:51 PM IST
ಮಂಗಳೂರು: ಜಿಲ್ಲಾಡಳಿತದ ತಪ್ಪು ನೀತಿಯೇ 60ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾಗಿದೆ. ಕೋವಿಡ್ 19 ನಿರ್ವಹಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗಿದೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ನಾಯಕರು ಆರೋಪಿಸಿದರು. ಕೋವಿಡ್ ಚಿಕಿತ್ಸೆಗೆ ನಿರಾಕರಿಸಿದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಿಯೋಗ ಮಂಗಳೂರಲ್ಲಿ ಇಂದು ಪ್ರತಿಭಟನೆ ನಡೆಸಿತು. ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆ ಎದುರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಿದರು.