ಕೋವಿಡ್ ಯೋಧರಿಗೆ ಆಪತ್ಭಾಂಧವನಾದ ಗೌರವ್ ಶೆಟ್ಟಿ
Team Udayavani, Apr 17, 2020, 7:39 PM IST
ಕೋವಿಡ್ ಹಿನ್ನೆಲೆಯಲ್ಲಿ ಲಾಕ್ಡೌನ್ ವಿಸ್ತರಣೆಯಾಗಿದ್ದು, ಕೆಲವೊಂದು ಅಗತ್ಯ ಸೇವೆಗಳು ಹೊರತುಪಡಿಸಿ ಇತರೇ ಕ್ಷೇತ್ರಗಳು ಬಂದ್ ಆಗಿವೆ. ಈ ಸಮಯದಲ್ಲಿ ಕೊರೊನಾ ವಾರಿಯರ್ಸ್ಗಳಾದ ಪೊಲೀಸರು, ವೈದ್ಯರು, ಆಶಾಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರ ದ್ವಿಚಕ್ರ ವಾಹನಗಳು ಕೆಟ್ಟು ಹೋದಲ್ಲಿ ಉಚಿತವಾಗಿ ಸರಿಪಡಿಸುವ ಮೂಲಕ ಗೌರವ ಶೆಟ್ಟಿ ಅವರು ವಿಭಿನ್ನವಾಗಿ ಸೇವೆ ಮಾಡಲು ಮುಂದಾಗಿದ್ದಾರೆ. ಗೌರವ್ ಅವರು ಮೂಲತಃ ಅಡ್ಯಾರಿನವರು. ಅಲ್ಲೇ ದ್ವಿಚಕ್ರ ವಾಹನ ರಿಪೇರಿ ಅಂಗಡಿ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ನಗರದಲ್ಲಿ ಸೇರಿದಂತೆ ಹೊರ ವಲಯದಲ್ಲಿ ದ್ವಿಚಕ್ರ ವಾಹನ ರಿಪೇರಿ ಅಂಗಡಿ ಬಾಗಿಲು ಮುಚ್ಚಿದ್ದು, ಇದರಿಂದಾಗಿ ಅಗತ್ಯ ಸೇವೆಗಳಿಗೆ ಬಳಕೆ ಮಾಡುವ ವಾಹನ ಕೆಟ್ಟು ಹೋದರೆ ಚಾಲಕರಿಗೆ ತೊಂದರೆ ಉಂಟಾಗುತ್ತಿದೆ. ಇದನ್ನೇ ಮನಗಂಡು ಗೌರವ್ ಅವರು ಉಚಿತವಾಗಿ ಬಕ್, ಸ್ಕೂಟರ್ ರಿಪೇರಿ ಕಾರ್ಯದಲ್ಲಿ ತೊಡಗಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?