Gurupura: 4 ಮನೆಗಳ ಮೇಲೆ ಕುಸಿದು ಬಿದ್ದ ಗುಡ್ಡ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಶಂಕೆ
Team Udayavani, Jul 5, 2020, 3:10 PM IST
ಮಂಗಳೂರು: ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಬಳಿ ರವಿವಾರ ನಡೆದಿದೆ. ನಾಲ್ಕು ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಎಂಟು ಮನೆಗಳು ಅಪಾಯದಲ್ಲಿದೆ. ಗುಡ್ಡ ಇನ್ನೂ ಕುಸಿಯುತ್ತಿದೆ ಎನ್ನಲಾಗಿದೆ. ತೆಂಗಿನ ಮರ ಸೇರಿದಂತೆ ಕೆಲವು ಮರಗಳು ಮಣ್ಣಿನ ಜೊತೆಗೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಧಾವಿಸಿದ್ದು, ಸಿಲುಕಿರುವವರ ಹೊರತೆಗೆಯಲು ಪ್ರಯತ್ನಿಸುತ್ತಿದ್ದಾರೆ.