LOCKDOWNನಿಂದಾಗಿ ಬೆಂಗಳೂರಿನಿಂದ ಬಂದವರು ಹೋಮ್ ಕ್ವಾರಂಟೈನ್ ನಲ್ಲಿ ಇರಲು ಜಿಲ್ಲಾಡಳಿತ ಮನವಿ
Team Udayavani, Jul 12, 2020, 3:30 PM IST
ಕುಂದಾಪುರ: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಒಂದು ವಾರ ಲಾಕ್ ಡೌನ್ ವಿಧಿಸಿರುವ ಕಾರಣ ಆ ಜಿಲ್ಲೆಗಳಿಂದ ಇನ್ನೆರಡು ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಜನರು ಬರುವ ನಿರೀಕ್ಷೆಯಿದೆ. ಬೆಂಗಳೂರಿನಿಂದ ಬಂದವರು ಸ್ವಯಂ ಪ್ರೇರಿತರಾಗಿ ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಉಡುಪಿ ಜಿಲ್ಲಾಡಳಿತ ಮನವಿ ಮಾಡಿದೆ.