ಕನಕಮಜಲು ಗ್ರಾಮ ಪಂಚಾಯತಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ
Team Udayavani, Apr 25, 2020, 8:03 PM IST
ಸುಳ್ಯ: ಪಂಚಾಯತ್ ಪುರಸ್ಕಾರ್ 2020 ಸಾಲಿನ ಪ್ರಗತಿ ಆಧರಿಸಿ, ಕೇಂದ್ರ ಪುರಸ್ಕೃತ ದೀನದಯಾಳ್ ಪಂಚಾಯತ್ ಸಶಕ್ತೀಕರಣ ಪುರಸ್ಕಾರವಾದ “ನಾನಾಜಿ ದೇಶ್ಮುಖ್ ರಾಷ್ಟ್ರೀಯ ಗೌರವ ಗ್ರಾಮಸಭಾ ಪುರಸ್ಕಾರ’ಕ್ಕೆ ಕರ್ನಾಟಕದ ಏಕೈಕ ಪಂಚಾಯತ್ ಕನಕಮಜಲು ಗ್ರಾ.ಪಂ. ಆಯ್ಕೆಯಾಗಿದೆ. ರಾಷ್ಟ್ರ ಮಟ್ಟದ ಕ್ಷೇತ್ರ ತಪಾಸಣೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ನಿರ್ದೇಶಕ ಎಸ್.ಎಂ. ಜುಲ್ಫಿàಕರ್ ಉಲ್ಲಾ, ಬೋಧಕರಾದ ಮಲ್ಲಿಕಾರ್ಜುನ ಸ್ವಾಮಿ, ಕೆ.ಆರ್. ಶಂಕರ್ ಅವರು ಫೆ. 13ರಂದು ಗ್ರಾ.ಪಂ.ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಅಂತಿಮವಾಗಿ ಗುರುತಿಸಲ್ಪಟ್ಟ ರಾಜ್ಯದ ಮೂರು ಗ್ರಾ.ಪಂ.ಗಳ ಪೈಕಿ ಕನಕಮಜಲು ಗ್ರಾ.ಪಂ.ಆವಾರ್ಡ್ಗೆಆಯ್ಕೆಯಾಗಿದೆ. ಕನಕಮಜಲು ಗ್ರಾ.ಪಂ.ಗೆ ಈಗಾಗಲೇ ಗಾಂಧಿ ಗ್ರಾಮ ಪುರಸ್ಕಾರ, ನಮ್ಮ ಗ್ರಾಮ ನಮ್ಮ ಯೋಜನೆ ಪುರಸ್ಕಾರ, ಸ್ವತ್ಛತಾ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ