ಉಳ್ಳಾಲ : ಕರ್ನಾಟಕ – ಕೇರಳ ಗಡಿ ವಿವಾದ! ಅಧಿಕಾರಿಗಳಿಂದ ಗಡಿ ಸರ್ವೇ ಕಾರ್ಯ
Team Udayavani, Apr 23, 2020, 6:47 PM IST
ಉಳ್ಳಾಲ: ಕರ್ನಾಟಕ – ಕೇರಳ ಗಡಿ ಪ್ರದೇಶವಾದ ದ.ಕ.ಜಿಲ್ಲೆಯ ಮಂಗಳೂರಿನಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ಬಳಿಕ ಕೇರಳ ಪೊಲೀಸರು ಗಡಿ ಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಭದ್ರತೆ ಯನ್ನು ಜಾರಿಗೊಳಿಸಿದ್ದು ತಲಪಾಡಿಯಲ್ಲಿ ಕರ್ನಾಟಕ ಚೆಕ್ ಪೋಸ್ಟ್ ಬಳಿಯೇ ಕೇರಳ ಚೆಕ್ ಪೋಸ್ಟ್ ನಿರ್ಮಾಣ ಇದೀಗ ಗಡಿ ವಿವಾದಕ್ಕೆ ಕಾರಣವಾಗಿದ್ದು, ಆಡಳಿತಾತ್ಮಕ ಚರ್ಚೆಯ ಬಳಿಕ ಇಂದು ಎರಡೂ ಜಿಲ್ಲೆಯ ಕಂದಾಯ ಇಲಾಖೆಯಿಂದ ಗಡಿ ಸರ್ವೇ ಕಾರ್ಯಕ್ಕೆ ಚಾಲನೆ ನೀಡಲಾಯಿತು.