Kundapura ಕೊಡೇರಿಯಲ್ಲಿ ದೋಣಿ ದುರಂತ: ನಾಲ್ವರು ಮೀನುಗಾರರು ನಾಪತ್ತೆ
Team Udayavani, Aug 16, 2020, 8:00 PM IST
ಕುಂದಾಪುರ : ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಪಲ್ಟಿಯಾಗಿ ನಾಲ್ಕು ಮಂದಿ ಮೀನುಗಾರರು ನಾಪತ್ತೆಯಾಗಿರುವ ಘಟನೆ ಕುಂದಾಪುರದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ. ನಾಪತ್ತೆಯಾದವರನ್ನು ಉಪ್ಪುಂದ ಕರ್ಕಿಕಳಿ ನಿವಾಸಿಗಳಾದ ಬಿ.ನಾಗ (46) ಲಕ್ಷ್ಮಣ (34) ಮಂಜುನಾಥ (38) ಹಾಗೂ ಇನ್ನೋರ್ವ ಉಪ್ಪುಂದ ಕರ್ಕಿಕಳಿ ಫಿಶರೀಸ್ ಕಾಲೋನಿಯ ಗಂಜೇರಿ ನಿವಾಸಿ ಶೇಖರ( 35 ) ಎನ್ನಲಾಗಿದೆ. ದೋಣಿಯಲ್ಲಿ ಒಟ್ಟು ಹನ್ನೆರಡು ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಪರಿಣಾಮ ನಾಲ್ಕು ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದೆ ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ.