11 ವರ್ಷಗಳಿಂದ ಪ್ರಾಣಿ ಪಕ್ಷಿಗಳಿಗೆ ಆಸರೆಯಾದ ಪರಿಸರವಾದಿ ಕೊರ್ಗಿ ವಿಠ್ಠಲ ಶೆಟ್ಟಿ
Team Udayavani, Apr 1, 2020, 6:24 PM IST
ತೆಕ್ಕಟ್ಟೆ : ಜಗತ್ತಿನಾದ್ಯಂತ ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್ 19 ವೈರಸ್ ತಡೆಗಟ್ಟಲು ಇಡೀ ದೇಶಾದ್ಯಂತ 21 ದಿನಗಳ ಕಾಲ ಲಾಕ್ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಪರಿಸರದಲ್ಲಿ ಗೋವು, ನಾಯಿ ಹಾಗೂ ಪಕ್ಷಿಗಳಿಗೆ ನಿತ್ಯ ಮುಂಜಾನೆ ಹಾಗೂ ಸಂಜೆ ವೇಳೆ ತಿಂಡಿ ತಿನಿಸು , ನೀರು ನೀಡುವ ಮೂಲಕ ಹಿರಿಯ ಪರಿಸರವಾದಿ ಕೊರ್ಗಿ ವಿಠಲ್ ಶೆಟ್ಟಿ ಅವರು ತೆರೆಯ ಮರೆಯಲ್ಲಿಯೇ ಮಾನವೀಯವಾಗಿ ಸ್ಪಂದಿಸುತ್ತಿದ್ದಾರೆ.