ಮಂಗಳೂರಿನ Urwa Market ವರ್ತಕರಿಯಿಂದ ಮಧ್ಯಾಹ್ನದ ಬಳಿಕ ಸ್ವಯಂಪ್ರೇರಿತವಾಗಿ ವ್ಯವಹಾರ ಸ್ಥಗಿತ
Team Udayavani, Jul 9, 2020, 6:15 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸುವುದು ಅನಿವಾರ್ಯ.
ಮುನ್ನೆಚ್ಚರಿಕಾ ದೃಷ್ಟಿಯಿಂದ ನಗರದ ಉರ್ವಾ ಮಾರುಕಟ್ಟೆಯಲ್ಲಿ ಮಧ್ಯಾಹ್ನದ ಬಳಿಕ ಸ್ವಯಂ ಪ್ರೇರಿತವಾಗಿ ವ್ಯವಹಾರವನ್ನು ಸ್ಥಗಿತಗೊಳಿಸಲು ವರ್ತಕರು ನಿರ್ಧರಿಸಿದ್ದಾರೆ. ಬೆಳಗ್ಗೆ 7 ಗಂಟೆಗೆ ವ್ಯವಹಾರ ಆರಂಭಗೊಂಡು ಮಧ್ಯಾಹ್ನ 1 ಗಂಟೆಯವರೆಗೆ ವ್ಯವಹಾರ ನಡೆಸಲಾಗುತ್ತದೆ. ಬಳಿಕ ಎಲ್ಲಾ ಅಂಗಡಿಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಲಾಗುತ್ತದೆ ಎಂದು ವರ್ತಕರು ತಿಳಿಸಿದ್ದಾರೆ.