ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅನಾರೋಗ್ಯದಿಂದ ವಿಧಿವಶ
Team Udayavani, May 15, 2020, 7:37 PM IST
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮತ್ತು 4R ಗ್ರೂಪ್ಸ್ ಸಮೂಹ ಸಂಸ್ಥೆಯ ಮುಖ್ಯಸ್ಥರಾಗಿರುವ ಮುತ್ತಪ್ಪ ರೈ(68) ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ. ತಡರಾತ್ರಿ ಸುಮಾರು 2:30 ರ ಸುಮಾರಿಗೆ ಮುತ್ತಪ್ಪ ರೈ ವಿಧಿವಶರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕಳೆದ ಎರಡು ವರ್ಷಗಳಿಂದ ಇವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಏಪ್ರಿಲ್ 30ರಂದು ಆರೋಗ್ಯ ಬಿಗಡಾಯಿಸಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಬಿಡದಿಯ ಸ್ವಗೃಹದಲ್ಲಿ ಶುಕ್ರವಾರ ಮಧ್ಯಾಹ್ನದ ನಂತರ ಕುಟುಂಬ ಸದಸ್ಯರಿಂದ ಮಾತ್ರ ಅಂತಿಮ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರು ಇಬ್ಬರು ಪುತ್ರರು, ಮೂವರು ತಮ್ಮಂದಿರು, ಒಬ್ಬ ತಂಗಿ, ಅಪಾರವಾದ ಅಭಿಮಾನಿಗಳನ್ನು ಮತ್ತು ಬಂಧುವರ್ಗವನ್ನು ಅಗಲಿದ್ದಾರೆ.