ಪಾದರಾಯನಪುರದಲ್ಲಿ ಕ್ವಾರೆಂಟೈನ್ ಮಾಡಲು ಹೋದವರ ಮೇಲೆ ಪುಂಡರ ಹಲ್ಲೆ
Team Udayavani, Apr 20, 2020, 6:56 PM IST
ಬೆಂಗಳೂರು: ಪಾದರಾಯನಪುರದಲ್ಲಿ 58 ಜನರನ್ನು ಕ್ವಾರೆಂಟೈನ್ ಮಾಡಲೆಂದು ತೆರಳಿದ್ದ ಆರೋಗ್ಯ ಯೋಧರ ಮೇಲೆ ಸ್ಥಳೀಯ ಕೆಲ ಪುಂಡರು ಹಲ್ಲೆಗೆ ಯತ್ನಿಸಿದ್ದು ಇದನ್ನು ತಡೆಯಲು ಬಂದ ಸೀಮಿತ ಪೊಲೀಸ್ ಪಡೆಗಳ ಮೇಲೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಪುಂಡರು ಹಲ್ಲೆ ನಡೆಸಿರುವ ಘಟನೆ ರವಿವಾರ ರಾತ್ರಿ ನಡೆದಿದೆ.