‘ಕಾಣದಾ ಕಡಲಿಗೆ’ ಹಾಡಿನಲ್ಲಿ ಮೋಡಿ ಮಾಡಿದ ರಾಯಚೂರು ಎಸ್.ಪಿ.
Team Udayavani, Nov 3, 2019, 11:56 PM IST
ರಾಯಚೂರು: ಪರಿಸರ ಕಾಳಜಿ, ರಕ್ತದಾನ ಶಿಬಿರ ಸೇರಿದಂತೆ ಹಲವಾರು ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಜನಾಭಿಮಾನಕ್ಕೆ ಪಾತ್ರರಾಗಿದ್ದ ರಾಯಚೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಇಂದು ತಮ್ಮಲ್ಲಿರುವ ಗಾಯನ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.