ಅಂತ್ಯಸಂಸ್ಕಾರದ ಬಳಿಕ ರಸ್ತೆಗೆಸೆದ ಪಿಪಿಇ ಕಿಟ್! ಶಿವಮೊಗ್ಗ ಪಾಲಿಕೆ ವಿರುದ್ಧ ಪ್ರತಿಭಟನೆ
Team Udayavani, Jul 11, 2020, 2:30 PM IST
ಶಿವಮೊಗ್ಗ ರೋಟರಿ ಶವಾಗಾರದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ವೃದ್ಧನನ್ನು ಪಾಲಿಕೆ ಅಧಿಕಾರಿಗಳು ಚಿತಗಾರದಲ್ಲಿ ಅರ್ಧಂಬರ್ಧ ಸುಟ್ಟು ಬಂದಿದ್ದರು. ಶವವನ್ನು ನಾಯಿಗಳು ಎಳೆದಾಡುತ್ತಿರುವುದನ್ನು ಕಂಡ ಜನ ಗಲಾಟೆ ಆರಂಭಿಸಿದ ಮೇಲೆ ಮತ್ತೆ ರಾತ್ರಿ ಎರಡು ಗಂಟೆಗೆ ಅಧಿಕಾರಿಗಳು ಶವವನ್ನು ಸಂಪೂರ್ಣವಾಗಿ ಸುಟ್ಟು ಬಂದಿದ್ದರು. ಆದರೆ ಈ ವೇಳೆ ಪಾಲಿಕೆ ಅಧಿಕಾರಿಗಳು ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದು, ಶವ ಸಂಸ್ಕಾರದ ವೇಳೆ ಧರಿಸಿದ್ದ ಪಿಪಿಇ ಕಿಟ್ ಗಳನ್ನು ರೋಟರಿ ಚಿತಾಗಾರದ ಎದುರಿನ ರಸ್ತೆ ಪಕ್ಕದಲ್ಲೇ ಬೀಸಾಡಿ ಹೋಗಿದ್ದಾರೆ. ಪಿಪಿಇ ಕಿಟ್ ಗಳನ್ನು ಸಾರ್ವಜನಿಕ ಸ್ಥಳದಲ್ಲಿ ಎಸೆದಿರುವ ಮಹಾನಗರ ಪಾಲಿಕೆ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎಚ್.ಸಿ.ಯೋಗೀಶ್ ನೇತೃತ್ವದಲ್ಲಿ ರಾಜೀವ್ ಗಾಂಧಿ ಬಡಾವಣೆ ಜನರು ಬಿ.ಎಚ್.ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!