SUNDAY LOCKDOWN ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಗಿ ಕರ್ಫ್ಯೂ ಜಾರಿ!
Team Udayavani, Jul 12, 2020, 10:24 AM IST
ಮಂಗಳೂರು: ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಹೇರಿರುವ ಭಾನುವಾರದ ಲಾಕ್ ಡೌನ್ ಕಾರಣದಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಕರ್ಫ್ಯೂ ಜಾರಿ ಮಾಡಲಾಗಿದೆ. ಎರಡನೇ ಹಂತದ ವೀಕೆಂಡ್ ಲಾಕ್ ಡೌನ್ ನ ಎರಡನೇ ಭಾನುವಾರ ಇಂದಾಗಿದ್ದು, ಅಗತ್ಯ ಸೇವೆ ಹೊರತು ಪಡಿಸಿ ಎಲ್ಲಾ ರೀತಿಯ ಸೇವೆಗಳು ಇಂದು ಬಂದ್ ಆಗಿರುತ್ತದೆ. ಹಾಲು, ಪೇಪರ್, ಮೆಡಿಕಲ್ ಮತ್ತು ವೈದ್ಯಕೀಯ ಸೇವೆ ಮಾತ್ರ ಲಭ್ಯವಿದ್ದು, ಜನರು ಅನಗತ್ಯವಾಗಿ ಮನೆಯಿಂದ ಹೊರಬಾರದು ಎಂದು ಸೂಚಿಸಲಾಗಿದೆ.