ಮಂಗಳೂರು ತೇಜಸ್ವಿನಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ರೋಗಿಗಳ ತುರ್ತು ಸ್ಥಳಾಂತರ
Team Udayavani, Jul 5, 2020, 3:09 PM IST
ಮಂಗಳೂರು: ನಗರದ ಕದ್ರಿ ಬಳಿಯ ತೇಜಸ್ವಿನಿ ಆಸ್ಪತ್ರೆಯಲ್ಲಿ ರವಿವಾರ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಕೂಡಲೇ ಮತ್ತೊಂದು ಕಡೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಎಂಆರ್ ಐ ಸ್ಕ್ಯಾನಿಂಗ್ ಕೊಠಡಿಯ ಬಳಿ ಶಾರ್ಟ್ ಸರ್ಕ್ಯೂಟ್ ಆಗಿ ಹತ್ತಿರದ ಬ್ಯಾಟರಿಗೆ ಬೆಂಕಿ ತಗುಲಿದೆ. ಕಟ್ಟಡದ ಕೆಳ ಅಂತಸ್ತಿನ ಮಾಳಿಗೆ ತುಂಬಾ ಹೊಗೆ ಆವರಿಸಿತ್ತು. ಆಸ್ಪತ್ರೆಯ ಮೇಲಿನ ಅಂತಸ್ತಿನಲ್ಲಿದ್ದ ಸುಮಾರು 20 ರೋಗಿಗಳನ್ನು ಅದೇ ಆಸ್ಪತ್ರೆಯ ಇನ್ನೊಂದು ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.