ರಾ. ಹೆದ್ದಾರಿ-73ರ ಮುಂಡಾಜೆ ಬಳಿ ರಸ್ತೆಗುರುಳಿದ ಮರ: ಸಂಚಾರ ಅಸ್ತವ್ಯಸ್ತ
Team Udayavani, Jul 9, 2020, 9:03 AM IST
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು- ಚಿಕ್ಕಮಗಳೂರು ರಸ್ತೆಯ ಮುಂಡಾಜೆಯ ಸೋಮಂತಡ್ಕ ಸಮೀಪದ ಅಂಬಡ್ತ್ಯಾರು ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟನೆ ಗುರುವಾರ ಮುಂಜಾನೆ ನಡೆಯಿತು.
ಇಂದು ಮುಂಜಾನೆ ಸುಮಾರಿಗೆ 6.45ರ ಸುಮಾರಿಗೆ ಬೃಹದಾಕಾರದ ಮರ ರಸ್ತೆಗೆ ಉರುಳಿ ಬಿದ್ದಿದೆ. ಹಾಗಾಗಿ ಕೆಲವು ವಾಹನಗಳು ಬದಲಿ ಗುಂಡಿ ರಸ್ತೆಯಲ್ಲಿ ಸಂಚಾರ ಮುಂದುವರಿಸಿದವು. ಮರ ರಸ್ತೆಗೆ ಉರುಳಿರುವುದರಿಂದ ವಿದ್ಯುತ್ ತಂತಿಗಳಿಗೆ ಹಾನಿಯಾಗಿದೆ.
ಇದೇ ರಸ್ತೆಯ ಮೂಲಕ ಬೆಂಗಳೂರಿಗೆ ಸಂಚರಿಸುತ್ತಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಕೂಡಾ ರಸ್ತೆಗೆ ಮರ ಬಿದ್ದ ಕಾರಣ ಸಮಸ್ಯೆಗೆ ಸಿಲುಕಿಕೊಂಡರು.
ಅರಣ್ಯ ಇಲಾಖೆ ಸಿಬಂದಿಗಳು ಸ್ಥಳಕ್ಕಾಗಮಿಸಿ ಮರ ತೆರವು ಮಾಡಿದ್ದಾರೆ. ಸುಮಾರು ಒಂದು ತಾಸು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು, ವಾಹನ ದಟ್ಟಣೆ ಕಡಿಮೆ ಇರುವ ಕಾರಣ ದೊಡ್ಡ ಮಟ್ಟದಲ್ಲಿ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ