Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ
Team Udayavani, Apr 3, 2020, 7:28 PM IST
ವಿಶ್ವವನ್ನೇ ಬಾಧಿಸುತ್ತಿರುವ ಕೋವಿಡ್ 19 ಮಹಾಮಾರಿಯ ವಿರುದ್ಧ ಇದೀಗ ಎಲ್ಲೆಡೆಯೂ ಜಾಗೃತಿ ಸಂದೇಶಗಳು ಬಿತ್ತರವಾಗುತ್ತಿವೆ. ಇದಕ್ಕೆ ಪೂರಕವಾಗಿ ಉಡುಪಿ ಜಿಲ್ಲೆಯ ಉದ್ಯಾವರದ ಸಿದ್ದಿಕಿ – ಇ – ಅಕ್ಬರ್ ಜಾಮಿಯಾ ಮಸೀದಿಯಲ್ಲೂ ಸಹ ದಿನಕ್ಕೆ ನಾಲ್ಕು ಬಾರಿಯಂತೆ ಮಸೀದಿಯ ಧ್ವನಿವರ್ಧಕದ ಮೂಲಕ ‘ಕೋವಿಡ್ 19’ ವೈರಸ್ ಜಾಗೃತಿ ಸಂದೇಶವನ್ನು ಬಿತ್ತರಿಸಲಾಗುತ್ತಿದೆ. ರಾಜ್ಯ ಸರಕಾರ ಮತ್ತು ರಾಜ್ಯ ವಕ್ಫ್ ಮಂಡಳಿಯ ಮನವಿಯ ಮೇರೆಗೆ ಇಂತಹ ಜನ ಜಾಗೃತಿಯ ಪೂರ್ವಮಾಹಿತಿಯನ್ನು ರಾಜ್ಯದ ಬಹುತೇಕ ಮುಸಲ್ಮಾನರ ಪ್ರಾರ್ಥನಾ ಮಂದಿರಗಳಲ್ಲಿ ಪ್ರತಿದಿನ ಬೆಳಿಗ್ಗೆ 10 ಗಂಟೆಗೆ, ಸಂಜೆ 4 ಗಂಟೆ, 6 ಗಂಟೆ, ರಾತ್ರಿ 8 ಗಂಟೆಗೆ ನೀಡಲಾಗುತ್ತಿದೆ. ಇನ್ನು ಕೆಲವೆಡೆ ಆಯಾ ಪ್ರದೇಶದ ಗ್ರಾಮಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದಿನಕ್ಕೆ ನಾಲ್ಕು ಬಾರಿ ಮಸೀದಿಗಳಲ್ಲಿ ಈ ಸೂಚನೆಯನ್ನು ಧ್ವನಿ ವರ್ಧಕ ಬಳಸಿ ನೀಡಲಾಗುತ್ತಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!