ವಿದ್ಯುತ್ ಬಿಲ್ ಗೊಂದಲ ಉಳ್ಳಾಲ ಮೆಸ್ಕಾಂ ಕಚೇರಿ ಎದುರು ಜಮಾಯಿಸಿದ ಗ್ರಾಹಕರು
Team Udayavani, May 26, 2020, 7:42 PM IST
ಉಳ್ಳಾಲ: ಲಾಕ್ಡೌನ್ ಹಿನ್ನಲೆಯಲ್ಲಿ ಎರಡು ತಿಂಗಳ ಮೆಸ್ಕಾಂ ಬಿಲ್ನಲ್ಲಿ ಗ್ರಾಹಕರಿಂದ ಹೆಚ್ಚುವರಿಯಾಗಿ ವಸೂಲಿಯಾಗುತ್ತಿದೆ ಎಂದು ಆರೋಪಿಸಿ ಗ್ರಾಹಕರು ಉಳ್ಳಾಲ ಮೆಸ್ಕಾಂ ಕಚೇರಿ ಎದುರು ಜಮಾಯಿಸಿದ್ದರಿಂದ ಕೆಲ ಕಾಲ ಗೊಂದಲ ಉಂಟಾದ ಘಟನೆ ಮಂಗಳವಾರ ಸಂಭವಿಸಿದೆ. ಬಿಲ್ ಬಗ್ಗೆ ಮೆಸ್ಕಾಂ ಅಧಿಕಾರಿಗಳು ಸ್ಪಷ್ಟನೆ ನೀಡಿದ ಬಳಿಕ ಕೆಲವರು ಬಿಲ್ ಪಾವತಿಸದರೆ, ಇನ್ನು ಕೆಲವರು ವ್ಯವಸ್ಥೆ ಬಗ್ಗೆ ಖೇದ ವ್ಯಕ್ತಪಡಿಸಿದರು. ಎಪ್ರಿಲ್ ಬಿಲ್ ಗ್ರಾಹಕರಿಗೆ ತಲುಪಿಸಿರಲಿಲ್ಲ. ಆದರೆ ಮೇ ತಿಂಗಳಲ್ಲಿ ಬಿಲ್ ನೀಡಿದಾಗ ಎರಡು ತಿಂಗಳ ಬಿಲ್ನಲ್ಲಿ ಗೊಂದಲ ಉಂಟಾಗಿದ್ದು, ಮಂಗಳವಾರ ಬಿಲ್ನೊಂದಿಗೆ ಗ್ರಾಹಕರು ಮೆಸ್ಕಾಂ ಕಚೇರಿಗೆ ಧಾವಿಸಿ ತರಾಟೆಗೆ ತೆಗೆದುಕೊಂಡರು. ಅಲ್ಲದೆ ಬಿಲ್ನಲ್ಲಿ ನಮೂದಾಗಿರುವ ಇತರ ಕಾಲಂನಲ್ಲಿ ಬಡ್ಡಿ ಹಣ ಹಾಕಲಾಗಿದೆ ಎಂದು ಆರೋಪಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ