ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಸರಕಾರ 2 ತಿಂಗಳ ಸಂಬಳ ನೀಡಿಲ್ಲ: ಖಾದರ್ ಆರೋಪ
Team Udayavani, May 30, 2020, 4:37 PM IST
ಮಂಗಳೂರು: ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ದಾದಿಯರಿಗೆ ಸರಕಾರ ಸಂಬಳ ಬಿಡುಗಡೆ ಮಾಡಿಲ್ಲ. ಸರಕಾರ ಕೋವಿಡ್ ವಿಚಾರದಲ್ಲಿ ಪ್ರಚಾರ ತೆಗೆದುಕೊಳ್ಳುತ್ತಿದೆ ಎಂದು ಮಾಜಿ ಸಚಿವ ಯು ಟಿ ಖಾದರ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ವೈದ್ಯರು ಅವರ ಜೀವ ಪಣಕಿಟ್ಟು ಹೆಚ್ಚುವರಿ ಕೆಲಸ ಮಾಡಿರುತ್ತಾರೆ. ಕೋವಿಡ್-19 ಸೋಂಕು ನಿರ್ಮೂಲನೆಗೆ 15 ಸಾವಿರ ದುಡಿಯುವ ವರ್ಗ ಇದ್ದಾರೆ. ಇವರಿಗೆಲ್ಲ ತಕ್ಷಣ ವೇತನ ನೀಡಬೇಕು, ಕೋವಿಡ್-19 ವಾರಿಯರ್ ಎಂದರೆ ಅಷ್ಟೇ ಸಾಲಲ್ಲ. ಆಶಾ ಕಾರ್ಯಕರ್ತೆಯರಿಗೂ ಸರಿಯಾಗಿ ಹಣ ಬಿಡುಗಡೆ ಮಾಡಿಲ್ಲ. ಸಿಎಂ ಹೆಚ್ಚುವರಿ ಕೊಡುತ್ತೇವೆ ಅಂತಾರೇ, ಮೊದಲು ಕೊಡುವ ಸಂಬಳ ಕೊಡಿ ಎಂದಿದ್ದಾರೆ.