ನವಜಾತ ಶಿಶುವಿಗೆ ಕ್ಯಾನ್ಸರ್ ಶಂಕೆ! ಜೀರೋ ಟ್ರಾಫಿಕ್ ಮೂಲಕ ಮಣಿಪಾಲ ಆಸ್ಪತ್ರೆಗೆ ಶಿಫ್ಟ್|
Team Udayavani, Jul 29, 2020, 3:07 PM IST
ಶಿವಮೊಗ್ಗ : ಕ್ಯಾನ್ಸರ್ ಶಂಕೆ ಹಿನ್ನೆಲೆಯಲ್ಲಿ ನವಜಾತ ಶಿಶುವನ್ನು ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಮಣಿಪಾಲ ಆಸ್ಪತ್ರೆಗೆ ಬುಧವಾರ ಶಿಫ್ಟ್ ಮಾಡಲಾಯಿತು. ಶನಿವಾರ ಬೆಳಿಗ್ಗೆ ಜನಿಸಿದ ಮಗುವಿನಲ್ಲಿ ಬಿಳಿ ರಕ್ತ ಕಣಗಳು ಜಾಸ್ತಿ ಇದ್ದಿದ್ದು ಅದರ ಜೊತೆಗೆ ಮಗುವಿನಲ್ಲಿ ಬ್ಲಡ್ ಇನ್ಫೆಕ್ಷನ್ ಕಾಣಿಸಿಕೊಂಡಿತ್ತು ಹೀಗಾಗಿ ಕ್ಯಾನ್ಸರ್ ಶಂಕೆ ವ್ಯಕ್ತಪಡಿಸಿದ ವೈದ್ಯರು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯದಿಂದ ಮಣಿಪಾಲ ಆಸ್ಪತ್ರೆಗೆ ಶಿಪ್ಟ್ ಮಾಡಿದ್ದಾರೆ. ಮಗುವಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಎಸ್ ಕಾರ್ಟ್ ನಲ್ಲಿ ಜಿರೋ ಟ್ರಾಫಿಕ್ ಮೂಲಕ ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!