ನಾಯಿ, ಮಾಲೀಕನ ವಿರುದ್ಧ ಕೊಲೆ ದೂರು!
Team Udayavani, Jan 13, 2017, 5:48 AM IST
ನಾಯಿ ಕಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ನಾಯಿ ಹಾಗೂ ಅದರ ಮಾಲೀಕನ ವಿರುದ್ಧ ಪೊಲೀಸ್ದೂರು ನೀಡಿದ ಅಚ್ಚರಿಯ ಪ್ರಕರಣ ಜಾರ್ಖಂಡ್ದಲ್ಲಿ ನಡೆದಿದೆ.
ನಾಯಿ ಕಡಿದು ವಿಷ್ಣುಡಿಯೋ ಸಿಂಗ್ ಎಂಬ ಸೆಕ್ಯುರಿಟಿ ಗಾರ್ಡ್ ಇತ್ತೀಚೆಗೆ ಸಾವನ್ನಪ್ಪಿದ್ದರು. ಇದರಿಂದ ನೊಂದ ಮೃತ ವ್ಯಕ್ತಿಯ ಮಗ, ನಾಯಿ ಹಾಗೂ ಅದರ ಮಾಲೀಕ ಗೌತಮ್ ಜೈಸ್ವಾಲ್ ಎಂಬುವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಾಣಿಗಳ ವಿರುದ್ಧ ದೂರು ನೀಡಲು ಸಾಧ್ಯವಿಲ್ಲ ಎಂದು ಪೊಲೀಸರು ವಿವರಿಸಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಶವವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿನ ಕಾರಣದ ಮೇಲೆ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ. ಜ.6ರಂದು ನಾಯಿ ಕಡಿದ ಮೇಲೆ ವಿಷ್ಣುಡಿಯೋ ಸಿಂಗ್ ರಿಗೆ ನಿರಂತರವಾಗಿ ರೇಬೀಸ್ ನಿರೋಧಕ ಇಂಜೆಕ್ಷನ್ ನೀಡಲಾಗಿತ್ತು. ಆಗ ಚೇತರಿಸಿಕೊಂಡಿದ್ದ ಸಿಂಗ್, ಜ.10ರಂದು ಮೃತಪಟ್ಟಿದ್ದರು.
ಟಾಪ್ ನ್ಯೂಸ್
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ