ಸಿನಿಮಾ ಶೈಲಿಯಲ್ಲಿ ಚಲಿಸುತ್ತಿದ್ದ ಟ್ರಕ್ನಿಂದ ಕಳ್ಳತನ… ವಿಡಿಯೋ ನೋಡಿ ಬೆಚ್ಚಿಬಿದ್ದ ಜನ
Team Udayavani, May 25, 2024, 3:09 PM IST
ಮಧ್ಯಪ್ರದೇಶ: ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ಚಲಿಸುವ ಟ್ರಕ್ನಿಂದ ಸರಕುಗಳನ್ನು ಕದಿಯುವ ವಿಶಿಷ್ಟ ಶೈಲಿಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಆಗ್ರಾ-ಮುಂಬೈ ಹೆದ್ದಾರಿಯಲ್ಲಿ ದೇವಾಸ್-ಶಾಜಾಪುರ ಮಾರ್ಗದ ನಡುವೆ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ರಕ್ ನ ಹಿಂದಿನಿಂದ ಬೈಕ್ ನಲ್ಲಿ ಬಂದ ಮೂವರ ತಂಡ ಚಲಿಸುತ್ತಿರುವ ಟ್ರಕ್ ಗೆ ಹಿಂದಿಂದ ಹತ್ತಿ ಟಾರ್ಪಲ್ ಹರಿದು ಅದರಲ್ಲಿದ್ದ ಸರಕನ್ನು ಕೆಳಗೆಸೆದು ಮತ್ತೆ ಬೈಕಿನಲ್ಲಿ ಪರಾರಿಯಾಗಿದ್ದಾರೆ, ಕಳ್ಳರ ಕೈಚಳಕವನ್ನು ಲಾರಿಯ ಹಿಂದಿನಿಂದ ಬರುತ್ತಿದ್ದ ಕಾರಿನಲ್ಲಿ ಪ್ರಯಾಣಿಸುತಿದ್ದವರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಆದರೆ ಈ ಘಟನೆಯಲ್ಲಿ ಇನ್ನೂ ಒಂದು ವಿಷಯ ಬೆಳಕಿಗೆ ಬಂದಿದ್ದು ಈ ಕಳ್ಳತನದಲ್ಲಿ ಟ್ರಕ್ ಚಾಲಕ ಕೂಡ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ ಕಾರಣ ಕಳ್ಳರು ಬೈಕ್ ನಲ್ಲಿ ಬಂದು ಕಳ್ಳತನ ಮಾಡುವ ಹೊತ್ತಿನಲ್ಲಿ ಚಾಲಕ ಟ್ರಕ್ ಅನ್ನು ನಿಧಾನವಾಗಿ ಚಲಾಯಿಸುವುದು ಕಾಣಬಹುದು ಇದಾದ ಬಳಿಕ ಕಳ್ಳರು ಸರಕನ್ನು ಕೆಳಗೆ ಎಸೆದು ಬೈಕ್ ನಲ್ಲಿ ಕುಳಿತ ಮೇಲೆ ತನ್ನ ವೇಗವನ್ನು ಹೆಚ್ಚಿಸುವುದನ್ನೂ ಕಾಣಬಹುದು ಹಾಗಾಗಿ ಈ ಪ್ರಕರಣದಲ್ಲಿ ಟ್ರಕ್ ಚಾಲಕನೂ ಭಾಗಿಯಾಗಿರುವ ಅನುಮಾನ ಎದ್ದು ಕಾಣಿತ್ತಿದೆ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.
ಅಲ್ಲದೆ ಘಟನೆ ಸಂಬಂಧ ಯಾವುದೇ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯ ಸತ್ಯಾಸತ್ಯತೆ ಇನ್ನಷ್ಟೇ ತಿಳಿದುಬರಬೇಕಾಗಿದೆ.
ये वीडियो आगरा-मुंबई नेशनल हाईवे पर मध्यप्रदेश में शाजापुर जिले की है। बाइक सवार 3 चोर चलते ट्रक से सामान चुरा रहे हैं। हालांकि इस घटना में ऐसा भी लगता है, जैसे ट्रक ड्राइवर की मिलीभगत हो। चोरी होने तक ट्रक साइड चलता रहा। चोरी पूरी होते ही ट्रक की साइड बदल गई… pic.twitter.com/FfhIZHpJps
— Sachin Gupta (@SachinGuptaUP) May 25, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ
NEET ಬೃಹತ್ ಹಗರಣ: ವಿಪಕ್ಷ ಆಕ್ರೋಶ ತೀವ್ರ
Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ
MUST WATCH
ಹೊಸ ಸೇರ್ಪಡೆ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
Jharkhand: ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು
Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.