ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!
Team Udayavani, Mar 21, 2023, 11:11 AM IST
ಮುಂಬಯಿ: ಆಸ್ಪತ್ರೆಯ ಬೆಡ್ ನಲ್ಲೇ ಕೂತು ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆದ ಘಟನೆ ಇತ್ತೀಚೆಗೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಮತ್ತೊಂದು ಘಟನೆ ಮುಂಬಯಿಯ ಬಾಂದ್ರಾದಲ್ಲಿ ನಡೆದಿದೆ.
ಅಂಜುಮನ್-ಐ-ಇಸ್ಲಾಂ ಶಾಲೆಯ 10ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿನಿ ಮುಬಾಶಿರಾ ಸಾದಿಕ್ ಸಯ್ಯದ್ ಇತ್ತೀಚೆಗೆ ತಮ್ಮ ವಿಜ್ಞಾನ ಪರೀಕ್ಷೆ ಬರೆದು ಮನೆಗೆ ಹೋಗುವಾಗ ಕಾರೊಂದು ಢಿಕ್ಕಿ ಹೊಡೆದಿದೆ. ಪರಿಣಾಮ ಮುಬಾಶಿರಾ ಎಡಕಾಲಿಗೆ ಬಲವಾದ ಏಟು ಬಿದ್ದಿದೆ. ಶಸ್ತ್ರಚಿಕಿತ್ಸೆಗೆ ಒಳಗಾಗುವ ಅನಿವಾರ್ಯತೆ ಎದುರಾಗುತ್ತದೆ. ಈ ವೇಳೆ ಶಿಕ್ಷಕರ ಬಳಿ ನೋವಿನಲ್ಲೇ ನಾನು ಪರೀಕ್ಷೆಯನ್ನು ಬರೆಯಬೇಕೆಂದು ಮುಬಾಶಿರಾ ಹೇಳಿ ಆಪರೇಷನ್ ಥಿಯೇಟರ್ ಯೊಳಗೆ ಹೋಗುತ್ತಾರೆ.
ಮುಬಾಶಿರಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿರುವ ಕಾರಣ ಸಂಬಂಧಪಟ್ಟ ಶಿಕ್ಷಕಕರು, ಅಧಿಕಾರಿಗಳು ವಿದ್ಯಾರ್ಥಿನಿ ಉಳಿದ ಪರೀಕ್ಷೆ ಬರೆಯಬೇಕೆಂದು ಹೇಳಿದ ಕಾರಣ, ಅದಕ್ಕೆ ಅನುಗುಣವಾಗಿ ಎಲ್ಲಾ ತಯಾರಿಗಳನ್ನು ಮಾಡಿದ್ದಾರೆ. ಆಂಬ್ಯುಲೆನ್ಸ್ ನಲ್ಲಿ ಮಲಗಿಯೇ ಮುಬಾಶಿರಾ ಪರೀಕ್ಷೆಯನ್ನು ಬರೆದಿದ್ದಾರೆ. ಈ ವೇಳೆ ಪೋಷಕರು, ಶಿಕ್ಷಕರು ಅವರ ಜೊತೆಗಿದ್ದರು.
ಕಾಲಿಗೆ ಬ್ಯಾಂಡೇಜ್ ಹಾಕಿದ ಕಾರಣ ಮುಂದಿನ ಪರೀಕ್ಷೆಯನ್ನು ಕೂಡ ಮುಬಾಶಿರಾ ಅವರು ಆಂಬ್ಯುಲೆನ್ಸ್ ಮಲಗಿಕೊಂಡೇ ಬರೆಯಲಿದ್ದಾರೆ.
ಬಡಕುಟುಂಬ ಆಗಿರುವ ಕಾರಣ ಶಿಕ್ಷಕರು ಅಪಘಾತದ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಆರ್ಥಿಕವಾಗಿ ನರೆವಿಗೆ ನಿಂತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ