Bengal: ಕೆಂಪು ಟೀ ಶರ್ಟ್‌ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!


Team Udayavani, Sep 26, 2023, 3:15 PM IST

Bengal: ಕೆಂಪು ಟೀ ಶರ್ಟ್‌ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!

ಪಶ್ಚಿಮ ಬಂಗಾಳ: 12 ವರ್ಷದ ಬಾಲಕನೊಬ್ಬ ರೈಲು ದುರಂತವನ್ನು ತಪ್ಪಿಸಿರುವ ಘಟನೆ ಇತ್ತೀಚೆಗೆ ಪಶ್ಚಿಮ ಬಂಗಾಳದ ಮಾಲ್ಡಾದ ರೈಲ್ವೆ ಯಾರ್ಡ್ ಬಳಿ ನಡೆದಿರುವುದು ವರದಿಯಾಗಿದೆ.

12 ವರ್ಷದ ಮುರ್ಸಲೀನ್ ಶೇಖ್ ರೈಲ್ವೇ ಯಾರ್ಡ್‌ ನಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರ ಮಗ. ಘಟನೆ ವೇಳೆ ಮುರ್ಸಲೀನ್ ಕೆಲ ಕಾರ್ಮಿಕರೊಂದಿಗೆ ಯಾರ್ಡ್‌ ನಲ್ಲಿ ಇದ್ದ. ಕಾರ್ಮಿಕರೊಂದಿಗೆ ರೈಲ್ವೇ ಹಳಿಯ ಯಾರ್ಡ್‌ ನಲ್ಲಿದ್ದ ಮುರ್ಸಲೀನ್ ಶೇಖ್ ರೈಲಿನ ಕೆಲ ಹಳಿಗಳು ಹಾನಿ ಆಗಿರುವುದನ್ನು ನೋಡಿದ್ದಾರೆ. ಈ ವೇಳೆಯೇ ದೂರದಿಂದ ಪ್ಯಾಸೆಂಜರ್‌ ರೈಲೊಂದು ಬರುವುದನ್ನು ಅವರು ಗಮನಿಸಿದ್ದಾರೆ.

ಇನ್ನೇನು ಹಾನಿಗೊಳಗಾದ ಹಳಿಗಳ ಮೇಲೆ ರೈಲು ಸಂಚರಿಸಿದರೆ ಅಪಘಾತವಾಗುವುದು ಖಚಿತವೆಂದುಕೊಂಡ ಬಾಲಕ ತಾನು ಹಾಕಿದ್ದ ಕೆಂಪು ಬಣ್ಣದ ಟೀ‌ ಶರ್ಟ್ ನ್ನೇ ಧ್ವಜದ ರೀತಿ ಉಪಯೋಗಿಸಿಕೊಂಡು ವೇಗದಿಂದ ಬರುತ್ತಿದ್ದ ರೈಲನ್ನು ನಿಲ್ಲಿಸಿದ್ದಾರೆ.

ರೈಲಿನ ಚಾಲಕನಿಗೆ ಎಚ್ಚರಿಕೆ ನೀಡುವ ಸಲುವಾಗಿ ಬಾಲಕ ತನ್ನ ಟೀ ಶರ್ಟ್‌ ನ್ನು ಧ್ವಜದ ರೀತಿ ಬಳಸಿದ್ದನ್ನು ನೋಡಿ ಲೋಕೋಮೋಟಿವ್ ಪೈಲಟ್ ತುರ್ತು ಬ್ರೇಕ್‌ ಹಾಕಿ ರೈಲನ್ನು ನಿಲ್ಲಿಸಿದ್ದಾರೆ. ಇದರಿಂದ ಸಂಭವಿಸಲಿದ್ದ ದೊಡ್ಡ ಅಪಘಾತ ತಪ್ಪಿದಂತೆ ಆಗಿದೆ.

ಈ ಬಗ್ಗೆ ಮಾತನಾಡುವ  ಈಶಾನ್ಯ ಗಡಿ ರೈಲ್ವೆಯ ವಕ್ತಾರ ಸಬ್ಯಸಾಚಿ ಡಿ, “ಮಾಲ್ಡಾದಲ್ಲಿ 12 ವರ್ಷದ ಬಾಲಕ ತನ್ನ ಕೆಂಪು ಶರ್ಟ್ ನ್ನು ರೈಲಿನ ಮುಂಭಾಗ ಬೀಸಿದ್ದಾನೆ. ಇದರಿಂದಾಗಿ ಲೋಕೋ-ಪೈಲಟ್ ತುರ್ತು ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ. ಭಾರೀ ಮಳೆಯಿಂದಾಗಿ ರೈಲು ಹಳಿ ಹಾಳಾಗಿದ್ದರಿಂದ ಬಾಲಕ ಹೀಗೆ ಮಾಡಿದ್ದಾನೆ” ಎಂದು ಅವರು ಹೇಳಿದ್ದಾರೆ.

ರೈಲ್ವೆ ಅಧಿಕಾರಿಗಳು ಬಾಲಕನ ಧೈರ್ಯವನ್ನು ಮೆಚ್ಚಿ ಪ್ರಮಾಣಪತ್ರವನ್ನು ನೀಡಿ ಗೌರವಿಸಿದ್ದಾರೆ. ನಗದು ಬಹುಮಾನವನ್ನು ಸಹ ನೀಡಿದ್ದಾರೆ. ಸ್ಥಳೀಯ ಸಂಸದರು ಮತ್ತು ವಿಭಾಗೀಯ ರೈಲು ವ್ಯವಸ್ಥಾಪಕರು ಬಾಲಕನ ಮನೆಗೆ ಭೇಟಿ ನೀಡಿ ಅಭಿನಂದಿಸಿದ್ದಾರೆ.

ಸದ್ಯ ಹಾನಿಗೊಳಗಾದ ಹಳಿಗಳ ಭಾಗವನ್ನು ಸರಿಪಡಿಸಿ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.