Video: ರೈಲು ಹತ್ತುವ ವೇಳೆ ನೂಕುನುಗ್ಗಲು, ಹಳಿ ಮೇಲೆ ಬಿದ್ದ ತಾಯಿ, ಇಬ್ಬರು ಮಕ್ಕಳು…
ಮೂವರು ಬದುಕಿ ಬಂದದ್ದೇ ಪವಾಡ
Team Udayavani, Dec 24, 2023, 1:04 PM IST
ಬಿಹಾರ: ರೈಲು ಹಳಿಯ ಮೇಲೆ ತಾಯಿ ಮತ್ತು ಇಬ್ಬರು ಮಕ್ಕಳು ಬಿದ್ದು ಅವರ ಮೇಲೆ ರೈಲು ಹರಿದ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರ ರೈಲು ನಿಲ್ದಾಣದಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳ ಮೇಲೆ ರೈಲು ಹರಿದಿದೆ ಆದರೆ ಇವರ ಅದೃಷ್ಟ ಚೆನ್ನಾಗಿತ್ತು ನೋಡಿ ಮೂವರೂ ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದಾರೆ.
ಏನಿದು ಘಟನೆ: ಶನಿವಾರ, ಮಹಿಳೆ ಮತ್ತು ಅವರ ಮಕ್ಕಳು ತಮ್ಮ ಕುಟುಂಬದೊಂದಿಗೆ ದೆಹಲಿಗೆ ತೆರಳಲು ವಿಕ್ರಮಶಿಲಾ ಎಕ್ಸ್ಪ್ರೆಸ್ ಹತ್ತಲು ಬಿಹಾರದ ಬರ್ಹ್ ರೈಲು ನಿಲ್ದಾಣಕ್ಕೆ ಬಂದಿದ್ದಾರೆ. ಈ ವೇಳೆ ರೈಲು ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲಿಗಾಗಿ ಕಾಯುತಿದ್ದರು ಇದಾದ ಕೆಲವೇ ಹೊತ್ತಿನಲ್ಲಿ ಪ್ಲಾಟ್ ಫಾರ್ಮ್ ಗೆ ರೈಲು ಬಂದಿದೆ ಈ ವೇಳೆ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಎತ್ತಿಕೊಂಡು ಜನರ ನೂಕುನುಗ್ಗಲ ನಡುವೆ ರೈಲು ಹತ್ತಲು ಮುಂದಾಗಿದ್ದಾಳೆ ಇನ್ನೇನು ರೈಲು ಹತ್ತಬೇಕು ಎನ್ನುವಷ್ಟರಲ್ಲಿ ಮಹಿಳೆಯ ಕಾಲು ಜಾರಿ ರೈಲು ಹಳಿಯ ಮೇಲೆ ಬಿದ್ದಿದ್ದಾರೆ ಇನ್ನೇನು ಅಲ್ಲಿದ ಜನ ರಕ್ಷಣೆಗೆ ಮುಂದಾಗಬೇಕು ಎನ್ನುವಷ್ಟರಲ್ಲಿ ರೈಲು ಹೊರಟಿದೆ.
ಈ ವೇಳೆ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ತಬ್ಬಿ ಹಿಡಿದು ರೈಲು ಹಳಿಗಳ ನಡುವೆ ಮಲಗಿದ್ದಾರೆ ರೈಲು ಹಾದು ಹೋಗುವ ವೇಳೆ ಅಲ್ಲಿದ್ದ ಜನ ಭಯಭೀತರಾಗಿದ್ದಾರೆ ಆದರೆ ರೈಲು ಹಾದು ಹೋದ ಬಳಿಕ ಅಲ್ಲಿದ್ದ ಸಾರ್ವಜನಿಕರು ಮಹಿಳೆ ಇದ್ದ ಕಡೆ ಧಾವಿಸಿ ರಕ್ಷಣೆ ಮಾಡಿ ಮೇಲೆ ಕರೆದು ತಂದಿದ್ದಾರೆ ಅದೃಷ್ಟವಶಾತ್ ಮೂವರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆಯನ್ನು ಅಲ್ಲಿದ್ದ ಕೆಲವರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ನಿಜಕ್ಕೂ ತಾಯಿ ಮಕ್ಕಳ ಅದೃಷ್ಟ ಚೆನ್ನಾಗಿತ್ತು ಮಹಿಳೆಯ ಸಮಯ ಪ್ರಜ್ಞೆಯಿಂದ ಮೂವರು ಬದುಕುಳಿಯುವಂತಾಯಿತು.
ಇದನ್ನೂ ಓದಿ: Test; ವಾಂಖೆಡೆಯಲ್ಲಿ ವನಿತೆಯರ ವಿಕ್ರಮ; ಆಸೀಸ್ ವಿರುದ್ಧ ಮೊದಲ ಬಾರಿಗೆ ಟೆಸ್ಟ್ ಗೆದ್ದ ಭಾರತ
Video: Train Passes Over Woman, Her 2 Children In Bihar. They Survive https://t.co/7u7prDle7R pic.twitter.com/Lg8wAPFb1e
— NDTV (@ndtv) December 23, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್