Beauty Parlour ಹೋದ ವಧು ಬರಲೇ ಇಲ್ಲ… ಹುಡುಗಿಗಾಗಿ ಮಂಟಪದಲ್ಲಿ ಕಾದು ಕಾದು ಸುಸ್ತಾದ ವರ


Team Udayavani, Jul 2, 2023, 3:59 PM IST

Beauty Parlour ಹೋದ ವಧು ಬರಲೇ ಇಲ್ಲ… ಹುಡುಗಿಗಾಗಿ ಮಂಟಪದಲ್ಲೇ ಕಾದು ಕುಳಿತ ವರ

ಮಧ್ಯಪ್ರದೇಶ: ಮದುವೆ ಅನ್ನೋದು ಜೀವನದ ಬಹು ಮುಖ್ಯ ಘಟ್ಟ, ಇಲ್ಲಿ ಮದುವೆ ಕಾರ್ಯಕ್ರಮಗಳು ನಿಗದಿಯಂತೆ ಸಾಂಗವಾಗಿ ನಡೆದರೆ ಎರಡೂ ಕಡೆಯ ಪೋಷಕರಿಗೆ ತಮ್ಮ ಒಂದು ದೊಡ್ಡ ಜವಾಬ್ದಾರಿ ನಿಭಾಯಿಸಿದ ಖುಷಿ, ಅದರಂತೆ ಮದುವೆಯಾಗುವ ವರ ಹಾಗೂ ವಧುವಿನ ಜೀವನದ ಹೊಸ ಅಧ್ಯಾಯ ಆರಂಭವಾಗುವ ಶುಭ ದಿನ.

ಈ ಶುಭ ದಿನ ಕೆಲವೊಮ್ಮೆ ನಾನಾ ಕಾರಣಗಳಿಂದ ತಪ್ಪಿ ಹೋಗುವುದನ್ನು ನೋಡಿದ್ದೇವೆ. ಕೆಲವೊಮ್ಮೆ ಹುಡುಗಿಗೆ ಬೇರೊಂದು ಸಂಬಂಧ ಇರುವುದು ಅಥವಾ ಹುಡುಗನಿಗೆ ಬೇರೊಂದು ಹುಡುಗಿಯ ಜೊತೆ ಸಂಬಂಧ ಇರುವುದು ಹೀಗೆ ನಾನಾ ಕಾರಣಗಳಿಂದ ನಿಗಧಿಯಾಗಿದ್ದ ಮದುವೆಗಳು ಮುರಿದಿದ್ದು ನೋಡಿದ್ದೇವೆ. ಅದರಂತೆ ಮಧ್ಯಪ್ರದೇಶದಲ್ಲೊಂದು ನಿಗಧಿಯಾಗಿದ್ದ ಮದುವೆ ಕೊನೆ ಗಳಿಗೆಯಲ್ಲಿ ವಧು ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ಹೇಳಿ ಹೋದ ವಧು ಮಂಟಪಕ್ಕೆ ಬರದೇ ನಾಪತ್ತೆಯಾಗಿ ಮದುವೆಯೇ ಮುರಿದುಹೋದ ಘಟನೆಯೊಂದು ನಡೆದಿದೆ.

ಘಟನೆ ವಿವರ : ಮಧ್ಯ ಪ್ರದೇಶದ ಡಿಡೋಲಿ ಕೊತ್ವಾಲಿ ಮೂಲದ ವಧುವಿನ ವಿವಾಹವು ನೌಗಾವಾನ್ ಸಾದತ್ ನಿವಾಸಿ ವರನೊಂದಿಗೆ ವಿವಾಹ ನಿಶ್ಚಯವಾಗಿತ್ತು. ಅದರಂತೆ ಮದುವೆಯ ದಿನ ವರ ಅದ್ದೂರಿ ಮೆರವಣಿಗೆಯ ಮೂಲಕ ಮಂಟಪಕ್ಕೆ ಬಂದಿದ್ದಾನೆ, ಆದರೆ ವಧು ಮದುವೆ ತಯಾರಿಗಾಗಿ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ಮನೆಯವರಲ್ಲಿ ಹೇಳಿ ಹೋಗಿದ್ದಾಳೆ ಇತ್ತ ವರನ ಕಡೆಯವರು ಸಂಭ್ರಮದಿಂದ ಮಂಟಪದಲ್ಲಿ ಅತ್ತಿಂದಿತ್ತ ಇತ್ತಿಂದ ಅತ್ತ ತಿರುಗಾಡುತ್ತಿದ್ದಾರೆ, ಇನ್ನೇನು ವರ ಜಯಮಾಲಾ ಕಾರ್ಯಕ್ರಮ ನಡೆಯಬೇಕು ಎಂದು ಪುರೋಹಿತರು ಮಂಟಪಕ್ಕೆ ಬಂದರೂ ಮದುವೆಯ ಹುಡುಗಿ ಮಾತ್ರ ಮಂಟಪಕ್ಕೆ ಬರಲಿಲ್ಲ. ಈ ವೇಳೆ ವರನ ಕಡೆಯವರು ವಧು ಎಲ್ಲಿ ಎಂದು ಕೇಳಿದ್ದಾರೆ ಆಗ ವಧುವಿನ ಕಡೆಯವರು ಹುಡುಗಿ ಬ್ಯೂಟಿ ಪಾರ್ಲರ್ ಗೆ ಹೋಗಿದ್ದಾಳೆ ಇನ್ನೇನು ಬಂದು ಬಿಡುತ್ತಾಳೆ ಎಂದು ಹೇಳಿದ್ದಾರೆ. ಇತ್ತ ವರಮಾಲಾ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ ಆದರೂ ಹುಡುಗಿ ಮಾತ್ರ ಬರಲಿಲ್ಲ ವರನ ಕಡೆಯವರಿಗೆ ಮನಸ್ಸಿನಲ್ಲಿ ಏನೋ ಭಯ ಆವರಿಸಲು ಶುರುವಾಗಿದೆ ಅಷ್ಟೋತ್ತಿಗಾಗಲೇ ವರನ ಪೋಷಕರು ವಧು ಎಲ್ಲಿ ಇನ್ನು ಬಂದಿಲ್ಲ ಎಂದು ಕೊಂಚ ಸಿಟ್ಟಿನಲ್ಲಿ ಕೇಳಿದ್ದಾರೆ ಅವಾಗ ವಧುವಿನ ಕಡೆಯವರು ಹುಡುಗಿ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ಹೇಳಿಹೋದಾಕೆ ನಾಪತ್ತೆಯಾಗಿರುವ ವಿಚಾರ ಹೇಳಿದ್ದಾರೆ ಇದರಿಂದ ಕೋಪಗೊಂಡ ವರನ ಕಡೆಯವರು ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ಹುಡುಗಿ ಮನೆಯವರ ವಿರುದ್ಧ ದೂರು ನೀಡಿದ್ದಾರೆ.

ಇಷ್ಟೆಲ್ಲಾ ಘಟನೆ ನಡೆದರೂ ವರ ಮಾತ್ರ ಮಂಟಪದಿಂದ ಕದಲಲೇ ಇಲ್ಲ ಆಕೆ ಬರುತ್ತಾಳೆ ಎಂಬ ನಂಬಿಕೆಯಲ್ಲೇ ಆಕೆಗಾಗಿ ಕಾದು ಕುಳಿತಿದ್ದಾನೆ.

ಅತ್ತ ವರನ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಿದ್ದಂತೆ, ಇತ್ತ ವಧುವಿನ ಕಡೆಯವರು ತಮ್ಮ ಹುಡುಗಿ ನಾಪತ್ತೆಯಾಗಿರುವ ಕುರಿತು ದೂರು ನೀಡಿದ್ದಾರೆ. ಎರಡೂ ಕಡೆಯ ದೂರುಗಳನ್ನು ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾದ ಹುಡುಗಿಯ ಪತ್ತೆಗೆ ಬಲೆ ಬಿಸಿದ್ದಾರೆ .

ಇದನ್ನೂ ಓದಿ: Maharashtra Politics; ಡಬಲ್ ಇಂಜಿನ್ ಸರ್ಕಾರ ಈಗ ತ್ರಿಬಲ್ ಇಂಜಿನ್ ಆಗಿದೆ: ಸಿಎಂ ಶಿಂಧೆ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.