Heart Attack: ಎದೆ ನೋವೆಂದು ಆಸ್ಪತ್ರೆಗೆ ಹೋಗುತ್ತಿದ್ದ ವ್ಯಕ್ತಿಗೆ ಬೈಕ್ನಲ್ಲೇ ಹೃದಯಾಘಾತ
Team Udayavani, Jun 19, 2023, 4:45 PM IST
ಭೋಪಾಲ್: ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಅಂಥದ್ದೇ ಆಘಾತಕಾರಿ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ಶನಿವಾರ(ಜೂ.17 ರಂದು) ಬರ್ವಾನಿಯಲ್ಲಿ ಈ ನಡೆದಿದ್ದು,ಎಕ್ಲಾರ ಬಸಾಹತ್ ನಿವಾಸಿ ಅಶೋಕ್ ಸೋಲಂಕಿ ಅವರು ಬೈಕ್ ಚಲಿಸಿಕೊಂಡು ಬರುವ ವೇಳೆಯೇ ಅವರಿಗೆ ಹೃದಯಾಘಾತ ಸಂಭವಿಸಿದೆ. ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ ವಾಹನಗಳಿಗೆ ಢಿಕ್ಕಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆ ತಂದರೂ ಅವರು ಆದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಇದನ್ನೂ ಓದಿ: Kerala: ಹೃದಯಾಘಾತಕ್ಕೆ 8 ತಿಂಗಳ ಮಗು ಬಲಿ; ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವರಿಗೆ ದೂರು
ಘಟನೆ ಬಗ್ಗೆ ಮಾಹಿತಿ ತಿಳಿದ ಸಮಾಜ ಸೇವಕ ಅಜಿತ್ ಜೈನ್ ಅವರು ಸ್ಥಳಕ್ಕೆ ತಲುಪಿ ಆಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ ಆಂಬ್ಯುಲೆನ್ಸ್ ಟ್ರಾಫಿಕ್ ಕಾರಣದಿಂದ ವೇಗವಾಗಿ ಆಸ್ಪತ್ರೆಗೆ ತಲುಪಲು ಆಗಿಲ್ಲ ಎಂದು ವರದಿ ತಿಳಿಸಿದೆ.
ಮೃತ ಯುವಕ ಕೂಲಿ ಕೆಲಸ ಮಾಡುತ್ತಿದ್ದರು. ಎದೆ ನೋವು ಕಾರಣದಿಂದ ಆಸ್ಪತ್ರೆಗೆ ಹೋಗಿ ಬರುವುದಾಗಿ ಕೆಲಸ ಬಿಟ್ಟು ಬಂದಿದ್ದಾರೆ. ದಾರಿ ಮಧ್ಯ ಆತ ಮೆಡಿಕಲ್ ಗೆ ಹೋಗಿ ಮಾತ್ರೆವೊಂದನ್ನು ತೆಗೆದುಕೊಂಡಿದ್ದಾನೆ. ಮೆಡಿಕಲ್ ಸಿಬ್ಬಂದಿ ಆತನಿಗೆ ಆಸ್ಪತ್ರೆಗೆ ದಾಖಲಾಗುವಂತೇ ಹೇಳಿದ್ದಾರೆ. ಆತನ ಮಾತನ್ನು ಕೇಳಿ ಯುವಕ ಆಸ್ಪತ್ರೆಗೆ ದಾಖಲಾಗಲು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಸಮಾಜ ಸೇವಕ ಅಜಿತ್ ಜೈನ್ ಹೇಳಿರುವುದಾಗಿ ವರದಿ ತಿಳಿಸಿದೆ.
ಘಟನೆಯ ವಿಡಿಯೋ ಅಂಗಡಿಯೊಂದರ ಸಿಸಿಟಿವಿಯಲ್ಲಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.
Caught on CCTV: Barwani man sufferes a #heartattack while riding a #bicycle in middle of the road, dies on spot.#Viral #ViralNews #MadhyaPradesh pic.twitter.com/wuBEw9C02Q
— Free Press Madhya Pradesh (@FreePressMP) June 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ