Viral: ರಸ್ತೆ ಮಧ್ಯೆ ಕಾರು ನಿಲ್ಲಿಸಿ ಬ್ಯಾರಿಕೇಡ್ಗೆ ಬೆಂಕಿ ಹಚ್ಚಿ ರೀಲ್ಸ್ ಮಾಡಿದಾತನ ಬಂಧನ
Team Udayavani, Mar 31, 2024, 10:23 AM IST
ದೆಹಲಿ: ಇನ್ಸ್ಟಾಗ್ರಾಮ್ ರೀಲ್ಸ್ ಗಾಗಿ ಜನನಿಬಿಡ ರಸ್ತೆಯಲ್ಲಿ ತನ್ನ ಕಾರನ್ನು ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ ವ್ಯಕ್ತಿಯೊಬ್ಬನಿಗೆ ದೆಹಲಿ ಟ್ರಾಫಿಕ್ ಪೊಲೀಸರು 36,000 ರೂಪಾಯಿ ದಂಡ ವಿಧಿಸಿ ಬಂಧಿಸಿದ್ದಾರೆ.
ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದು, ಪ್ರದೀಪ್ ಢಾಕಾ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಪ್ರದೀಪ್ ಢಾಕಾ ಎಂಬಾತ ದೆಹಲಿಯ ಪಶ್ಚಿಮ ವಿಹಾರ್ನಲ್ಲಿರುವ ಫ್ಲೈಓವರ್ನಲ್ಲಿ ಜನದಟ್ಟಣೆಯ ಸಮಯದಲ್ಲಿ ಕಾರನ್ನು ನಿಲ್ಲಿಸಿ, ಇನ್ಸ್ಟಾಗ್ರಾಮ್ ರೀಲ್ಸ್ ಮಾಡಿದ್ದಾನೆ. ಕಾರಿನ ಡೋರ್ ತೆರೆದು ವೇಗವಾಗಿ ವಾಹವನ್ನು ಓಡಿಸಿಕೊಂಡು ಹೋಗಿದ್ದಾರೆ. ಇದಲ್ಲದೆ ಪಶ್ಚಿಮ ವಿಹಾರ್ನಲ್ಲಿನ ಫ್ಲೈಓವರ್ನಲ್ಲಿ ವಾಹನವನ್ನು ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಗಳಿಗೆ ಬೆಂಕಿ ಹಂಚಿ ಅದರ ಮುಂದೆ ಪೋಸ್ ನೀಡಿದ್ದಾರೆ.
ರೀಲ್ಸ್ ಅಪ್ಲೋಡ್ ಮಾಡಿದ ಬಳಿಕ ಪೊಲೀಸರು ವಿಡಿಯೋ ಆಧಾರದ ಮೇಲೆ ಕೃತ್ಯವೆಸಗಿದ ಪ್ರದೀಪ್ ನನ್ನು ಬಂಧಿಸಿ ಕಾರನ್ನು ಜಪ್ತಿ ಮಾಡಿ, 36,000 ರೂಪಾಯಿಯ ದಂಡವನ್ನು ವಿಧಿಸಿದ್ದಾರೆ.
ಪೊಲೀಸರ ಮೇಲೆ ಪ್ರದೀಪ್ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು,ಇದಕ್ಕಾಗಿಯೂ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರದೀಪ್ ಢಾಕಾ ತನ್ನ ಸೋಶಿಯಲ್ ಮೀಡಿಯಾ ಸ್ಟಂಟ್ಗಳಿಗೆ ಬಳಸುತ್ತಿದ್ದ ಕಾರು ಅವರ ತಾಯಿಯ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ವಾಹನದಲ್ಲಿ ಕೆಲವು ನಕಲಿ ಪ್ಲಾಸ್ಟಿಕ್ ಆಯುಧಗಳೂ ಪೊಲೀಸರಿಗೆ ಸಿಕ್ಕಿವೆ.
रील बनाने के लिए विभिन्न यातायात प्रावधानों का उल्लंघन करने वाले आरोपी के विरुद्ध #दिल्लीपुलिस ने मोटर वाहन अधिनियम के अंतर्गत सख्त कार्यवाही करते हुए चालान कर वाहन ज़ब्त किया और पुलिसकर्मियों से अभद्रता एवं उनपर हमला करने पर आईपीसी की धाराओं में केस दर्ज कर गिरफ्तार किया। pic.twitter.com/2f5VBJrwtS
— Delhi Police (@DelhiPolice) March 30, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
MUST WATCH
ಹೊಸ ಸೇರ್ಪಡೆ
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.