Video: ದೇವಸ್ಥಾನದ ಉತ್ಸವದ ವೇಳೆ ದೇವರನ್ನು ಹೊತ್ತ ಆನೆಯ ರಂಪಾಟ… ಹಲವು ಮಂದಿಗೆ ಗಾಯ
Team Udayavani, Mar 24, 2024, 8:58 AM IST
ತಿರುವನಂತಪುರಂ: ದೇವಸ್ಥಾನದ ಉತ್ಸವದ ಮೆರವಣಿಗೆ ನಡೆಯುತ್ತಿರುವ ವೇಳೆ ದೇವರನ್ನು ಹೊತ್ತ ಆನೆಯೊಂದು ಯೂಚಿಗೆದ್ದು ಜೊತೆಗಿದ್ದ ಇನ್ನೊಂದು ಆನೆಯ ಮೇಲೆ ದಾಳಿ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ಶುಕ್ರವಾರ ತ್ರಿಶೂರ್ನ ತರಕ್ಕಲ್ ದೇವಸ್ಥಾನದ ಉತ್ಸವದ ನಡೆಯುತ್ತಿದ್ದ ವೇಳೆ, ‘ಅಮ್ಮತಿರುವಾಡಿ’ ದೇವರ ಮೆರವಣಿಗೆಯಲ್ಲಿ ಗುರುವಾಯೂರ್ ರವಿಕೃಷ್ಣನ್ ಎಂಬ ಆನೆ ಇನ್ನೊಂದು ಆನೆ ಪುತ್ತುಪ್ಪಲ್ಲಿ ಅರ್ಜುನನ್ ನಡುವೆ ಕಾದಾಟ ನಡೆದಿದೆ. ಈ ವೇಳೆ ಆನೆಯ ಮಾವುತ ಶ್ರೀಕುಮಾರ್ (53) ಮೂರು ಬಾರಿ ದಾಳಿಯಿಂದ ಪಾರಾಗಿದ್ದರೂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಕೂರ್ಕೆಂಚೇರಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು ಎಂದು ಹೇಳಲಾಗಿದೆ. ಅಷ್ಟುಮಾತ್ರವಲ್ಲದೆ. ಮೆರವಣಿಗೆ ಮೊದಲು ನೆರೆದಿದ್ದ ಜನರು ಭಯದಿಂದ ಓಡುವ ಭರದಲ್ಲಿ ಬಿದ್ದು ಗಾಯಗೊಂಡಿದ್ದಾರೆ.
ಕಾದಾಟ ನಡೆಸುತ್ತಿದ್ದ ಆನೆಗಳನ್ನು ಶಾಂತಗೊಳಿಸಲು ಸುಮಾರು ಒಂದುಗಂಟೆಗಳ ಕಾಲ ಹರಸಾಹಸ ಪಡಬೇಕಾಯಿತು ಎಂದು ಹೇಳಲಾಗಿದೆ.
ಸುರಕ್ಷತಾ ಕ್ರಮ:
ಆನೆಗಳ ದಾಳಿಯ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ದೇವಳದ ಉತ್ಸವ ಕಾರ್ಯಕ್ರಮ ನಡೆಸುವ ವೇಳೆ ಆನೆಗಳನ್ನು ಬಳಸುವುದಾದರೆ ಹೆಚ್ಚಿನ ಸುರಕ್ಷಿತ ಕ್ರಮ ಕೈಗೊಳ್ಳಬೇಕೆಂದು ದೇವಳದ ಆಡಳಿತ ಮಂಡಳಿ ನಿರ್ಧರಿಸಿದೆ, ಅಲ್ಲದೆ ಭಕ್ತರ ಹಿತದೃಷ್ಟಿಯಿಂದ ಮುಂಜಾಗ್ರತಾ ವಹಿಸುವುದು ಸೂಕ್ತ ಎಂದು ಆಡಳಿತ ಮಂಡಳಿ ನಿರ್ಧಾರಕ್ಕೆ ಬಂದಿದೆ.
A captive #elephant runs amok during the Arattupuzha pooram in #Kerala‘s Thrissur. The elephant attacked an elephant and also injured several humans.
It is peak summer and also peak of temple festivals in Kerala. pic.twitter.com/QHvDLTPgOP— Bobins Abraham Vayalil (@BobinsAbraham) March 23, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ