ಎನ್ಕೌಂಟರ್ ಭೀತಿ: “ಯೋಗಿ ಜೀ ನನ್ನನು ಕ್ಷಮಿಸಿ” ಪೋಸ್ಟರ್ ಹಿಡಿದು ಪೊಲೀಸರಿಗೆ ಶರಣಾದ ಕಳ್ಳ
Team Udayavani, Mar 16, 2023, 3:31 PM IST
ಲಕ್ನೋ: ಕೆಲವರಿಗೆ ತಪ್ಪು ಮಾಡಿದ ಬಳಿಕ ಪಶ್ಚಾತ್ತಾಪ ಆಗುವುದುಂಟು. ಇಲ್ಲೊಬ್ಬ ವ್ಯಕ್ತಿ ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡು ಕೊನೆಗೆ ಜೀವ ಭಯದಿಂದ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಅಂಕುರ್ ಅಲಿಯಾಸ್ ರಾಜಾ ಎನ್ನುವವ ಕಳೆದ ಕೆಲ ಸಮಯದಿಂದ ನಾನಾ ರೀತಿಯ ಕಳ್ಳತನವನ್ನು ಮಾಡುತ್ತಿದ್ದ. ಬೈಕ್ ಕಳ್ಳತನ ಗ್ಯಾಂಗ್ ವೊಂದರಲ್ಲಿ ಗುರುತಿಸಿಕೊಂಡಿದ್ದ. ಠಾಣೆಯಲ್ಲಿ ಈತನ ವಿರುದ್ದ ಹಲವು ಪ್ರಕರಣಗಳು ದಾಖಲಾಗಿದ್ದರೂ, ಯಾವುದೇ ಭಯ – ಭೀತಿಯಿಲ್ಲದೆ ಕಳ್ಳತನವ್ನೇ ತನ್ನ ವೃತ್ತಿಯಾಗಿಸಿಕೊಂಡಿದ್ದ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ ಬಳಿಕ ಕಾನೂನು ಕ್ರಮದಲ್ಲಿ ಹತ್ತಾರು ಕಠಿಣ ನಿಯಮಗಳನ್ನು ಆಳವಡಿಸಿಕೊಂಡಿದ್ದಾರೆ. ಆರೋಪಿಗಳ ಮನೆ ಧ್ವಂಸ, ಎನ್ ಕೌಂಟರ್ ನಂತಹ ಕ್ರಮಗಳು ಯುಪಿಯಲ್ಲಿ ಜಾರಿಯಲ್ಲಿವೆ.
ಇದನ್ನೂ ಓದಿ:ನಡು ರಸ್ತೆಯಲ್ಲೇ ಪ್ರಾಧ್ಯಾಪಕಿ ಮೇಲೆ ಹಲ್ಲೆ ನಡೆಸಿ ಎಳೆದೊಯ್ದು ದರೋಡೆ: ವಿಡಿಯೋ ವೈರಲ್
ಇತ್ತೀಚೆಗೆ ಪೊಲೀಸರು ಹಾಗೂ ಗ್ಯಾಂಗ್ ವೊಂದರ ನಡುವೆ ಎನ್ ಕೌಂಟರ್ ಆಗಿತ್ತು. ಈ ಗ್ಯಾಂಗ್ ನ ಇಬ್ಬರನ್ನು ಪೊಲೀಸರು ಬಂಧಿಸಿದ್ದರು.
ಇದೇ ಕಾರಣದಿಂದ ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯ ಮನ್ಸೂರ್ಪುರ ಪೊಲೀಸ್ ಠಾಣೆಗೆ ಅಂಕುರ್ ಅಲಿಯಾಸ್ ರಾಜಾ ಪೋಸ್ಟರ್ ವೊಂದನ್ನು ಕೈಯಲ್ಲಿ ಹಿಡಿದುಕೊಂಡು ಬಂದಿದ್ದಾನೆ. ಆ ಪೋಸ್ಟರ್ ನಲ್ಲಿ ʼನನ್ನನು ಕ್ಷಮಿಸಿ ಯೋಗಿಜೀ, ನಾನು ತಪ್ಪು ಮಾಡಿದೆʼ ಎಂದು ಬರೆದುಕೊಂಡು ಪೊಲೀಸರಿಗೆ ಶರಣಾಗಿದ್ದಾರೆ. ಇನ್ಮುಂದೆ ನಾನೆಂದೂ ಅಪರಾಧವನ್ನು ಎಸಗಲ್ಲ ಎಂದು ಪೊಲೀಸರ ಮುಂದೆ ಆರೋಪಿ ಹೇಳಿದ್ದಾನೆ.
ಕೊಲೆ ಪ್ರಕರಣ ಲೂಟಿ ಪ್ರಕರಣದಲ್ಲಿ ಈತನ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಯೋಗಿ ಯುಪಿಯಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಬಳಿಕ 9 ಸಾವಿರಕ್ಕೂ ಹೆಚ್ಚಿನ ಎನ್ ಕೌಂಟರ್ ಗಳು ನಡೆದಿದೆ. ಪೊಲೀಸ್ ದಾಖಲೆಗಳ ಪ್ರಕಾರ, 160 ಶಂಕಿತ ಕ್ರಿಮಿನಲ್ಗಳು ಎನ್ಕೌಂಟರ್ಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ