Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ


Team Udayavani, May 8, 2024, 4:56 PM IST

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

ನವದೆಹಲಿ: ʼಅಪ್ಪಿಕೋ ಚಳವಳಿʼ ಬಗ್ಗೆ ನೀವು ಕೇಳಿರಬಹುದು. ವರ್ಷಾನುಗಟ್ಟಲೇ  ನಡೆದ ಈ ಚಳವಳಿಯಲ್ಲಿ ಸಾವಿರಾರು ಮರಗಳು ಕೊಡಲಿ ಏಟಿನಿಂದ ಬಚಾವ್‌ ಆಗಿವೆ. ಇಲ್ಲೊಬ್ಬ ಯುವಕ ಮರಗಳನ್ನು ತಬ್ಬಿಕೊಂಡು ವಿಶ್ವ ದಾಖಲೆ ಬರೆದು ಸುದ್ದಿಯಾಗಿದ್ದಾನೆ.

ಘಾನಾ ದೇಶದ 29 ವರ್ಷದ ಫಾರೆಸ್ಟ್ರಿ ಕಲಿಕೆಯ  (forestry student) ವಿದ್ಯಾರ್ಥಿ ಅಬೂಬಕರ್ ತಾಹಿರು ಒಂದು ಗಂಟೆಯೊಳಗೆ 1,123 ಮರಗಳನ್ನು ತಬ್ಬಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಮೂಲಕ ಸುದ್ದಿಯಾಗಿದ್ದಾರೆ.

ಇವರ ದಾಖಲೆಯ ವಿಡಿಯೋವನ್ನು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಇನ್ಸ್ಟಾಗ್ರಾಮ್‌ ಪೇಜ್‌ ನಲ್ಲಿ ಹಂಚಿಕೊಂಡಿದೆ.

ಅಮೆರಿಕದ ಅಲಬಾಮಾದಲ್ಲಿರುವ ಟುಸ್ಕೆಗೀ ನ್ಯಾಷನಲ್ ಫಾರೆಸ್ಟ್‌ನಲ್ಲಿ ಈ ದಾಖಲೆಯನ್ನು ಮಾಡಲಾಗಿದೆ. ಅಬುಬಕರ್ ಪ್ರತಿ ನಿಮಿಷಕ್ಕೆ ಸುಮಾರು 19 ಮರಗಳನ್ನು ಅಪ್ಪಿಕೊಂಡಿದ್ದಾರೆ.  ಪ್ರತಿ ಅಪ್ಪುಗೆಯು ಕಟ್ಟುನಿಟ್ಟಾದ ಮಾನದಂಡಗಳನ್ನು ಒಳಗೊಂಡಿತ್ತು. ಎರಡೂ ತೋಳುಗಳು ಮರದ ಸುತ್ತಲೂ ಸುತ್ತುವರಿದಿರಬೇಕಿತ್ತು. ಯಾವುದೇ ಮರವನ್ನು ಒಂದಕ್ಕಿಂತ ಹೆಚ್ಚು ಬಾರಿ ತಬ್ಬಿಕೊಳ್ಳುವಂತಿರಲಿಲ್ಲ. ಯಾವುದೇ ರೀತಿಯಲ್ಲಿ ಮರಕ್ಕೆ ಹಾನಿಯಾಗುವಂತಿರಲಿಲ್ಲ.

“ಈ ವಿಶ್ವ ದಾಖಲೆಯನ್ನು ಸಾಧಿಸಿರುವುದಕ್ಕೆ ತುಂಬಾ ಖುಷಿಯಾಗಿದೆ. ಇದು ನಮ್ಮ ಪರಿಸರ ವ್ಯವಸ್ಥೆಯಲ್ಲಿ ಮರಗಳ ಪ್ರಾಮುಖ್ಯತೆ ಮತ್ತು ಪರಿಸರ ಸಂರಕ್ಷಣೆಯ ಅಗತ್ಯತೆ ಯನ್ನು ಎತ್ತಿ ತೋರಿಸಲು ಒಂದು ಅರ್ಥಪೂರ್ಣವಾದ ಸೂಚಕವಾಗಿದೆ” ಎಂದು ತಾಹಿರು ಹೇಳಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ 9 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳೊಂದಿಗೆ ವಿಡಿಯೋ ವೈರಲ್ ಆಗಿದೆ. ಅಬೂಬಕರ್ ಅವರ ಸಾಧನೆಗೆ ಸಾಮಾಜಿಕ ಜಾಲತಾಣ ಬಳಕೆದಾರರು ಶ್ಲಾಘಿಸಿದ್ದಾರೆ.

ಘಾನಾದ ತೆಪಾದಲ್ಲಿನ ರೈತ ಸಮುದಾಯದಿಂದ ಬಂದ ಅಬೂಬಕರ್‌ಗೆ ಪ್ರಕೃತಿ ಸಂರಕ್ಷಣೆಯ ಆಸಕ್ತಿ ಚಿಕ್ಕ ವಯಸ್ಸಿನಿಂದಲೇ ಬಂದಿದೆ. ಘಾನಾದ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಅರಣ್ಯಶಾಸ್ತ್ರದಲ್ಲಿ ಪದವಿಪೂರ್ವ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ, ಅವರು ಆಬರ್ನ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಕಳೆದ ವರ್ಷ ಅಲಬಾಮಾಗೆ ತೆರಳಿದ್ದರು.

ಈ ವಿಶ್ವ ದಾಖಲೆಯನ್ನು ಮಾಡಿದ ಬಳಿಕ, ಅಬುಬಕರ್ ತಾಹಿರು ಪರಿಸರ ಸಂಸ್ಥೆಗಳೊಂದಿಗೆ ಸಹಕರಿಸುವ ಮೂಲಕ ಅರಣ್ಯ ರಕ್ಷಣೆಯಲ್ಲಿ ತನ್ನನು ತಾನು ತೊಡಗಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

Bidar: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

15

Manipal: ಸಿಟಿ ಬಸ್‌ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!

Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!

thief

ಸಿನಿಮಾ ಶೈಲಿಯಲ್ಲಿ ಚಲಿಸುತ್ತಿದ್ದ ಟ್ರಕ್‌ನಿಂದ ಕಳ್ಳತನ… ವಿಡಿಯೋ ನೋಡಿ ಬೆಚ್ಚಿಬಿದ್ದ ಜನ

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

1-qeeewqewqeqw

Dabangg!; ಬಂಧನಕ್ಕಾಗಿ 4 ಮಹಡಿ ಏರಿ ವಾರ್ಡ್‌ಗೇ ನುಗ್ಗಿದ ಪೊಲೀಸ್‌ ಜೀಪ್‌!

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.