Video: ಚಿರತೆ ಆಸ್ಪತ್ರೆಯ ಒಳಗೆ… ರೋಗಿಗಳು, ಸಿಬ್ಬಂದಿಗಳು ಆಸ್ಪತ್ರೆಯ ಹೊರಗೆ
ಸಿಬಂದಿಯ ಸಮಯ ಪ್ರಜ್ಞೆಯಿಂದ ರೋಗಿಗಳು ಸಿಬಂದಿಗಳು ಪಾರು
Team Udayavani, Dec 13, 2023, 11:27 AM IST
ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿಗೆ ಬರುವುದು ಸಾಮಾನ್ಯವಾಗಿ ಬಿಟ್ಟಿದೆ, ಅದೇ ರೀತಿ ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯಲ್ಲಿರುವ ಆಸ್ಪತ್ರೆಯೊಂದಕ್ಕೆ ಚಿರತೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ.
ಆಸ್ಪತ್ರೆಯೊಳಗೆ ರೋಗಿಗಳು ಇದ್ದ ವೇಳೆ ರಾತ್ರೋ ರಾತ್ರಿ ಚಿರತೆಯೊಂದು ಆಸ್ಪತ್ರೆ ಕಟ್ಟಡದ ಒಳಗೆ ಪ್ರವೇಶಿಸಿದೆ. ಇದನ್ನು ಗಮನಿಸಿದ ಆಸ್ಪತ್ರೆಯ ಸಿಬಂದಿ ಕೂಡಲೇ ಸಮಯ ಪ್ರಜ್ಞೆ ಮೆರೆದು ರೋಗಿಗಳು ಇರುವ ಕೊಠಡಿಯ ಬಾಗಿಲನ್ನು ಮುಚ್ಚಿ ಬಳಿಕ ಚಿರತೆ ಒಳಗೆ ಬಂದ ಬಾಗಿಲನ್ನು ಹೊರಗಿನಿಂದ ಬಂದು ಲಾಕ್ ಮಾಡಿದ್ದಾನೆ ಇದರಿಂದ ಚಿರತೆಗೆ ಹೊರಬರಲು ಸಾಧ್ಯವಾಗದೆ ಆಸ್ಪತ್ರೆಯೊಳಗೆ ಬಂಧಿಯಾಗಿದೆ.
ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯಲ್ಲಿರುವ ಶಹದಾ ಪ್ರದೇಶದ ಆದಿತ್ಯ ಹೆರಿಗೆ ಮತ್ತು ಕಣ್ಣಿನ ಆಸ್ಪತ್ರೆಯಲ್ಲಿ ಮಂಗಳವಾರ ಘಟನೆ ಸಂಭವಿಸಿದ್ದು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಬಳಿಕ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್, ಚಿರತೆ ಆಸ್ಪತ್ರೆಗೆ ಬಂದ ನಂತರ ರೋಗಿಗಳು ಭಯಭೀತರಾಗಿದ್ದರೂ, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಸಿಕ್ಕಿಬಿದ್ದ ಪ್ರಾಣಿಯನ್ನು ನೋಡಲು ರೋಗಿಗಳ ಸಂಬಂಧಿಕರು ಸೇರಿದಂತೆ ಅನೇಕ ಜನರು ಆಸ್ಪತ್ರೆಯ ಹೊರಗೆ ಜಮಾಯಿಸಿದ್ದರು.
#WATCH | Maharashtra: A Leopard entered a hospital in Nandurbar Taluka of Shahada on Tuesday. The leopard was later rescued by the Forest Department. (12.12) pic.twitter.com/ArOTltCFXg
— ANI (@ANI) December 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್