UAE: ಅರಬ್‌ ಎಮಿರಾಟಿ ಉಡುಗೆ ತೊಟ್ಟು ದುಬಾರಿ ಕಾರು ಖರೀದಿಸಿದ ರೀಲ್ಸ್; ವ್ಯಕ್ತಿ ವಶಕ್ಕೆ


Team Udayavani, Jul 11, 2023, 2:28 PM IST

UAE: ಅರಬ್‌ ಎಮಿರಾಟಿ ಉಡುಗೆ ತೊಟ್ಟು ದುಬಾರಿ ಕಾರು ಖರೀದಿಸಿದ ರೀಲ್ಸ್; ವ್ಯಕ್ತಿ ವಶಕ್ಕೆ

ಯುಎಇ: ಸೋಶಿಯಲ್‌ ಮೀಡಿಯಾದಲ್ಲಿ ರೀಲ್ಸ್‌ ಗಳು ಬಹುಬೇಗವಾಗಿ ವೈರಲ್‌ ಆಗುತ್ತದೆ. ಏನೇ ಹಾಕಿದರೂ ಅದು ಯಾವ ಸಂದರ್ಭದಲ್ಲಿ ವೈರಲ್‌ ಆಗುತ್ತದೆ ಎನ್ನುವುದನ್ನು ಹೇಳಲಾಗದು. ಆದರೆ ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋಗಳನ್ನು ಹಾಕುವ ಮುನ್ನ ಎಚ್ಚರವಹಿಸಬೇಕು. ವೈರಲ್‌ ಆದ ಬಳಿಕ ಅದರ ವಿರುದ್ಧ ಕೇಳಿಬರುವ ಆಕ್ರೋಶವನ್ನು ಸ್ವೀಕರಿಸಲು ಕೂಡ ನಾವು ಸಿದ್ದರಿರಬೇಕು.

ಇತ್ತೀಚೆಗೆ ಅರಬ್‌ ಎಮಿರಾಟಿ ಉಡುಗೆಯನ್ನು ತೊಟ್ಟು ವ್ಯಕ್ತಿಯೊಬ್ಬ ಕಾರು ಶೋರೂಮ್ ವೊಂದಕ್ಕೆ ಹೋಗುತ್ತಾನೆ. ಆತನ ಹಿಂದೆ ಹಣದ ಕಂತೆಯನ್ನು ಹಿಡಿದುಕೊಳ್ಳಲು ವ್ಯಕ್ತಿಗಳಿರುತ್ತಾರೆ. ಕಾರಿನ ಶಾಪ್‌ ನೊಳಗೆ ಬಂದ ಕೂಡಲೇ ಅಲ್ಲಿರುವ ಸಿಬ್ಬಂದಿ ಕಾಫಿ ಕುಡಿಯೆಂದು ನೋಟಿನ ಕಂತೆಯನ್ನು ಎಸೆಯುತ್ತಾನೆ. ಆ ಬಳಿಕ ಅಲ್ಲಿರುವ ಸಿಬ್ಬಂದಿ ಬಳಿ ಶಾಪ್‌ ನಲ್ಲಿರುವ ಅತ್ಯಂತ ದುಬಾರಿ ಕಾರನ್ನು ತೋರಿಸು ಎನ್ನುತ್ತಾನೆ. ರೋಲ್ಸ್ ರಾಯ್ಸ್ ಸೇರಿದಂತೆ ಇತರ ಎರಡು ಮೂರು ದುಬಾರಿ ಕಾರುಗಳನ್ನು ಖರೀದಿಸುತ್ತಾನೆ. ಈ ವಿಡಿಯೋ ಇನ್ಸ್ಟಾಗ್ರಾಮ್‌ ರೀಲ್ಸ್‌ ನಲ್ಲಿ ಅಪ್ಲೋಡ್‌ ಮಾಡಲಾಗಿದೆ.

ಇದನ್ನೂ ಓದಿ: B’town: ಪಾತ್ರಕ್ಕಾಗಿ ಬೆತ್ತಲೆ ಆಗುವುದು.. ನಗ್ನತೆ ಪ್ರಶ್ನೆಗೆ ನೇರವಾಗಿ ಉತ್ತರಿಸಿದ ನಟಿ

ಈ ವಿಡಿಯೋ ನೋಡಿ ಇವನು ಅರಬ್‌ ದೇಶದ ಶ್ರೀಮಂತ ವ್ಯಕ್ತಿ ಆಗಿರಬಹುದು ಎಂದು ಜನ ಊಹಿಸಿದ್ದಾರೆ. ಈ ವಿಡಿಯೋ ಕೆಲವೇ ದಿನಗಳಲ್ಲಿ ಮಿಲಿಯನ್‌ ಗಟ್ಟಲೇ ವೀವ್ಸ್‌ ಆಗಿದೆ.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಇದರ ಸತ್ಯಾಸತ್ಯತೆ ಗೊತ್ತಾಗಿದೆ. ಇದೊಂದು ಸ್ಫೂಫ್‌ ವಿಡಿಯೋ ಎಂದು ಗೊತ್ತಾಗಿದ್ದು, ಪ್ರಚಾರಕ್ಕಾಗಿ ಇದನ್ನು ಮಾಡಲಾಗಿದೆ. ಎಮಿರಾಟಿ ನಾಗರಿಕರಿಗೆ ಅಲ್ಲಿನ ಸಂಪ್ರದಾಯಿಕ ಉಡುಗೆಯನ್ನು ತೊಟ್ಟು ಅವಮಾನ ಮಾಡಲಾಗಿದೆ ಎನ್ನುವ ಟೀಕೆಗಳು ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ವಿಡಿಯೋ ಮಾಡಿದ ವ್ಯಕ್ತಿಯನ್ನು  ಫೆಡರಲ್ ಪ್ರಾಸಿಕ್ಯೂಷನ್ ಆದೇಶದ ಮೇರೆಗೆ ವಶಕ್ಕೆ‌ ಪಡೆಯಲಾಗಿದ್ದು, ಎಮಿರಾಟಿ ಸಮಾಜವನ್ನು “ಅವಮಾನಿಸುವ” ವಿಷಯವನ್ನು ಪ್ರಕಟಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಕಾರಿನ ಶೋರೂಮ್ ಮಾಲಕನ್ನು ಈ ಬಗ್ಗೆ ವಿಚಾರಣೆಗೆ ಹಾಜರಾಗಲು ಹೇಳಲಾಗಿದ ಎಂದು “ಡಬ್ಲ್ಯೂಎಎಂ” ವರದಿ ತಿಳಿಸಿದೆ.

ಯುಎಇಯಲ್ಲಿ ವದಂತಿಗಳನ್ನು ಹರಡುವುದು ಮತ್ತು ಸುಳ್ಳು ಮಾಹಿತಿಯನ್ನು ಪ್ರಕಟಿಸುವ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ.

ಟಾಪ್ ನ್ಯೂಸ್

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

telangana

Telangana: ನೀರಿನಲ್ಲಿ ಮೃತದೇಹ ತೇಲುತ್ತಿದೆ ಎಂದು ದಡಕ್ಕೆ ಎಳೆದು ತಬ್ಬಿಬ್ಬಾದ ಪೊಲೀಸರು…

Video: ಮೀಟಿಂಗ್ ವೇಳೆ ಅಧಿಕಾರಿಗಳ ಮೇಲೆ ಕೋಪ… ಕಡತವನ್ನು ಎತ್ತಿ ಬಿಸಾಡಿದ ಮೇಯರ್

Video: ಮೀಟಿಂಗ್ ವೇಳೆ ಅಧಿಕಾರಿಗಳ ಮೇಲೆ ಕೋಪ… ಕಡತವನ್ನು ಬಿಸಾಡಿ ಆಕ್ರೋಶ ಹೊರ ಹಾಕಿದ ಮೇಯರ್

ದ್ವಿಚಕ್ರ ವಾಹನಕ್ಕೆ ಪೆಟ್ರೋಲ್‌ ಹಾಕಿದ ಬಳಿಕ ಪ್ಯಾಂಟ್‌ ಬಿಚ್ಚಿ Payment ಆಯ್ತು ಎಂದ ಯುವತಿ!

ದ್ವಿಚಕ್ರ ವಾಹನಕ್ಕೆ ಪೆಟ್ರೋಲ್‌ ಹಾಕಿದ ಬಳಿಕ ಪ್ಯಾಂಟ್‌ ಬಿಚ್ಚಿ Payment ಆಯ್ತು ಎಂದ ಯುವತಿ!

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

Rabkavi Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.