Wife: ಗೋವಾದಲ್ಲಿ ಹನಿಮೂನ್ ಎಂದೇಳಿ ಅಯೋಧ್ಯೆಗೆ ಕರೆದೊಯ್ದ ಪತಿ: ವಿಚ್ಚೇದನ ಕೇಳಿದ ಪತ್ನಿ.!
Team Udayavani, Jan 25, 2024, 1:55 PM IST
ಸಾಂದರ್ಭಿಕ ಚಿತ್ರ
ಭೋಪಾಲ್: ತನ್ನ ಪತಿ ಹನಿಮೂನ್ಗೆ ಗೋವಾಕ್ಕೆ ಕರೆದುಕೊಂಡು ಹೋಗುವ ಭರವಸೆ ನೀಡಿ ಅಯೋಧ್ಯೆಗೆ ಕರೆದೊಯ್ದ ಬಳಿಕ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ವಿಚ್ಛೇದನ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದು, ಸದ್ಯ ದಂಪತಿಗಳು ಕೌನ್ಸಿಲಿಂಗ್ ಸೆಷನ್ಗೆ ಒಳಗಾಗಿದ್ದಾರೆ ಎಂದು ಸಂಬಂಧ ಸಲಹೆಗಾರರಾದ (Relationship counsellor) ಶೈಲ್ ಅವಸ್ತಿ ಹೇಳಿದ್ದಾರೆ.
ಕಳೆದ ವರ್ಷ ಆಗಸ್ಟ್ನಲ್ಲಿ ದಂಪತಿಗಳು ವಿವಾಹವಾಗಿದ್ದಾರೆ. ಗಂಡ ಐಟಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ತನ್ನ ಹೆಂಡತಿಯನ್ನು ತಮ್ಮ ಹನಿಮೂನ್ಗಾಗಿ ವಿದೇಶಿ ಸ್ಥಳಕ್ಕೆ ಕರೆದೊಯ್ಯು ಯೋಜನೆಯನ್ನು ಪೋಷಕರ ಬಳಿ ಹೇಳಿದ್ದಾರೆ. ಆದರೆ ಪೋಷಕರು ಇಬ್ಬರಿಗೆ ಹನಿಮೂನ್ಗೆ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಿ ಎಂದಿದ್ದಾರೆ.
ಇದನ್ನೂ ಓದಿ: Karnataka Politics: ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್
ಇದರಿಂದ ದಂಪತಿಗಳ ನಡುವೆ ಮನಸ್ತಾಪ ಉಂಟಾಗಿದೆ. ಆದರೆ ಕೊನೆಯಲ್ಲಿ ಗೋವಾ ಕರೆದುಕೊಂಡು ಹೋಗುತ್ತೇನೆ ಎಂದು ಪತ್ನಿಯ ಬಳಿ ಗಂಡ ಹೇಳಿದ್ದಾರೆ. ಗೋವಾ ಹೋಗಲು ತಯಾರಾಗಿದ್ದ ಪತ್ನಿಗೆ ಪ್ರವಾಸದ ಒಂದು ದಿನದ ಮೊದಲು, ತಾಯಿಯ ಇಚ್ಛೆಯಂತೆ ನಾವು ಅಯೋಧ್ಯೆಗೆ ಹೋಗಲಿದ್ದೇವೆ ಎಂದು ಪತ್ನಿ ಬಳಿ ಹೇಳಿದ್ದಾರೆ.
ಅಯೋಧ್ಯೆಗೆ ಹೋಗಿ ಬಂದ ಬಳಿಕ, ದಂಪತಿಗಳ ನಡುವೆ ಮನಸ್ತಾಪ ಹೆಚ್ಚಾಗಿದೆ. ಈ ಕಾರಣದಿಂದ ತನ್ನ ಪತಿ ನನ್ನ ನಂಬಿಕೆಯನ್ನು ಮುರಿದಿದ್ದಾರೆ. ಮೊದಲಿನಿಂದಲೂ ತನ್ನ ಕುಟುಂಬಕ್ಕೆ ಮಾತ್ರ ಹೆಚ್ಚಿನ ಆದ್ಯತೆ ನೀಡುತ್ತಾರೆ ಎಂದು ಆರೋಪಿಸಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಸದ್ಯ ದಂಪತಿಗಳ ದಂಪತಿಗೆ ಕೌನ್ಸೆಲಿಂಗ್ ನಡೆಯುತ್ತಿದೆ ಎಂದು ಅವಸ್ತಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು