Naatu Naatu ದಾಟಿಯಲ್ಲಿ ವೈರಲ್ ಆಗುತ್ತಿದೆ ಬಿಜೆಪಿಯ ಮೋದಿ ಮೋದಿ ಹಾಡು


Team Udayavani, Apr 11, 2023, 4:55 PM IST

Naatu Naatu ದಾಟಿಯಲ್ಲಿ ವೈರಲ್ ಆಗುತ್ತಿದೆ ಬಿಜೆಪಿಯ ಮೋದಿ ಮೋದಿ ಹಾಡು

ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಜನಪ್ರೀಯ ಹಾಡು ನಾಟು ನಾಟು ಹಾಡಿನ ದಾಟಿಯಲ್ಲಿ ಮೋದಿ ಮೋದಿ ಎನ್ನುವ ಬಿಜೆಪಿ ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಹಾಡನ್ನು ಚುನಾವಣಾ ಪ್ರಚಾರಕ್ಕಾಗಿ ಸಂಯೋಜಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷವು ಮಂಗಳವಾರ ತೆಲುಗು ಚಲನಚಿತ್ರ ಆರ್.ಆರ್.ಆರ್ ನಿಂದ ಆಸ್ಕರ್ ವಿಜೇತ ನಾಟು ನಾಟು ಹಾಡಿನ ರೀಮಿಕ್ಸ್ ಅನ್ನು ಬಿಡುಗಡೆ ಮಾಡಿದೆ.

ಚುನಾವಣಾ ಪ್ರಚಾರದ ಹಾಡಿನಲ್ಲಿ, ಮೂಲ ನಾಟು ನಾಟು ಸಾಹಿತ್ಯವನ್ನು ಮೋದಿ ಮೋದಿ ಎಂದು ಬದಲಾಯಿಸಲಾಗಿದೆ, ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳ ಬಗೆಗೆ ಈ ಹಾಡಿನಲ್ಲಿ ಹೇಳಲಾಗಿದೆ. ಅಲ್ಲದೆ ಈ ವಿಡಿಯೊದಲ್ಲಿ ಜನರು ಪ್ರಸಿದ್ಧ ನಾಟು ನಾಟು ಹಾಡಿಗೆ ಹೆಜ್ಜೆಯನ್ನೂ ಅನುಕರಣೆ ಮಾಡುತ್ತಿರುವುದು ಕಂಡುಬಂದಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಅನೇಕ ಯೋಜನೆಗಳು ಮಾಡಿದೆ . ಶಿವಮೊಗ್ಗ ವಿಮಾನ ನಿಲ್ದಾಣ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ, ಮೆಟ್ರೋ ಮಾರ್ಗಗಳು ಮತ್ತು ಇತರ ಕಲ್ಯಾಣ ಯೋಜನೆಗಳಂತಹ ಯೋಜನೆಗಳ ಮೇಲೆ ಕೇಂದ್ರೀಕರಿಸಿದೆ.

ರಾಜಕೀಯ ಪಕ್ಷವೊಂದು ಆಸ್ಕರ್ ಪ್ರಶಸ್ತಿ ವಿಜೇತ ಹಾಡನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದು ಇದೇ ಮೊದಲಲ್ಲ. 2009 ರಲ್ಲಿ, ಸ್ಲಮ್ ಡಾಗ್ ಮಿಲಿಯನೇರ್‌ನ ‘ಜೈ ಹೋ’ ಹಾಡು ಆಸ್ಕರ್ ಪ್ರಶಸ್ತಿಯನ್ನು ಗೆದ್ದಾಗ, ಕಾಂಗ್ರೆಸ್ ಪಕ್ಷವೂ ಸಹ ಈ ಹಾಡನ್ನು ‘ಜೈ ಹೋ ಕಾಂಗ್ರೆಸ್’ ಎಂದು ಸಂಯೋಜನೆ ಮಾಡಿತ್ತು.

ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಬಾರಿ ಮತದಾನ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜನತಾ ದಳ ನಡುವೆ ಚುನಾವಣಾ ಕದನ ನಡೆಯಲಿದೆ.

ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಅವರು ವಿಡಿಯೋವನ್ನು ಟ್ವಿಟರ್‌ ನಲ್ಲಿ ಶೇರ್‌ ಮಾಡಿದ್ದಾರೆ. “ಪ್ರಧಾನಮಂತ್ರಿ ಶ್ರೀ @narendramodi ನೇತೃತ್ವದ ನಮ್ಮ ಡಬಲ್ ಇಂಜಿನ್ @BJP4Karnataka ಸರ್ಕಾರದ ಪ್ರಯತ್ನಗಳು ಕರ್ನಾಟಕದಲ್ಲಿ ಅಭಿವೃದ್ಧಿ ಉತ್ಸವವನ್ನು ಅದ್ಭುತವಾದ ಹಾಡಿನ ಮೂಲಕ ಜನರಿಗೆ ತಲುಪಿಸಲು ಶ್ರಮಿಸುತ್ತಿವೆ @BJYM ಶ್ಲಾಘನೀಯ.” ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.