Heart Attack: ಕ್ರಿಕೆಟ್ ಆಡುವ ವೇಳೆ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು
Team Udayavani, Jan 10, 2024, 12:40 PM IST
ನೋಯ್ಡಾ: ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಪ್ರತಿದಿನ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ವರದಿಗಳು ಬರುತ್ತಿವೆ. ಇದೀಗ ನೋಯ್ಡಾದಿಂದ ಅಂತಹುದೇ ಪ್ರಕರಣವೊಂದು ಬಂದಿದ್ದು, ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ರನ್ ತೆಗೆದುಕೊಳ್ಳುವಾಗ ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಇತರ ಆಟಗಾರರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆದರೆ ಅಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದರು ಎನ್ನಲಾಗಿದೆ.
ಈ ಘಟನೆಯು ಥಾನಾ ಎಕ್ಸ್ಪ್ರೆಸ್ವೇ ಪ್ರದೇಶದ ಸೆಕ್ಟರ್ -135 ರಲ್ಲಿ ನಡೆದಿದ್ದು, ಇಲ್ಲಿನ ಕ್ರೀಡಾಂಗಣದಲ್ಲಿ ಶನಿವಾರ ಕೆಲವು ಮಂದಿ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಉತ್ತರಾಖಂಡ ಮೂಲದ 36 ವರ್ಷದ ವಿಕಾಸ್ ನೇಗಿ ಬ್ಯಾಟಿಂಗ್ಗೆ ಬಂದಿದ್ದರು. ಆಟದ ವೇಳೆ ವಿಕಾಸ್ ರನ್ ತೆಗೆದುಕೊಳ್ಳಲು ಓದಿದ್ದಾರೆ ಆದರೆ ಇದರ ನಡುವೆ ಹೃದಯಾಘಾತಕ್ಕೆ ಒಳಗಾಗಿ ಪಿಚ್ ನಲ್ಲೇ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಇತರ ಆಟಗಾರರು ವಿಕಾಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಅಷ್ಟೊತ್ತಿಗಾಗಲೇ ತಡವಾಗಿತ್ತು. ವಿಕಾಸ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ವಿಕಾಸ್ ರನ್ ತೆಗೆದುಕೊಳ್ಳಲು ಓಡಿ ನಂತರ ಪಿಚ್ ಮೇಲೆ ಬೀಳುವುದು ಕಂಡುಬಂದಿದೆ.
ಇದನ್ನೂ ಓದಿ: Derails: ನಿಲ್ದಾಣ ತಲುಪುತ್ತಿದ್ದಂತೆ ಹಳಿತಪ್ಪಿದ ಚಾರ್ಮಿನಾರ್ ಎಕ್ಸ್ಪ್ರೆಸ್ ರೈಲು…
Horrible scenes from SOP Cricket Ground in Noida where a middle aged man had a heart attack mid pitch & passed away on the way to hospital. This is getting scarily common especially post Covid. Om Shanti! pic.twitter.com/gQJ4DrzOa0
— Sushant Chaturvedi (@ShawshankOne) January 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
MUST WATCH
ಹೊಸ ಸೇರ್ಪಡೆ
Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ