ಸಾಮಾನ್ಯ ವ್ಯಕ್ತಿಯೆಂದು ಎನ್ಕೌಂಟರ್ ಸ್ಪೆಷಲಿಸ್ಟ್ ಪೊಲೀಸ್ ಮೇಲೆಯೇ ಸರ ಕಳ್ಳರ ದಾಳಿ
ಮುಂದೆ ಆಗಿದ್ದೇನು?
Team Udayavani, Mar 18, 2024, 11:38 AM IST
ದೆಹಲಿ: ವಾಕಿಂಗ್ ಹೊರಟ್ಟಿದ್ದ ಖಾಕಿಯ ಸರವನ್ನು ಕಳ್ಳತನ ಮಾಡಲು ಹೋಗಿ ವ್ಯಕ್ತಿಗಳಿಬ್ಬರು ಪೇಚಿಗೆ ಸಿಲುಕಿರುವ ಘಟನೆ ದೆಹಲಿಯ ಚಾಣಕ್ಯಪುರಿ ನಡೆದಿದೆ.
ಏನಿದು ಘಟನೆ?: ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ನ ಎನ್ಕೌಂಟರ್ ಸ್ಪೆಷಲಿಸ್ಟ್ ಆಗಿರುವ ವಿನೋದ್ ಬಡೋಲಾ ಅವರು ನೆಹರೂ ಪಾರ್ಕ್ನಲ್ಲಿ ಸಂಜೆ ವಾಕ್ ಮಾಡಲು ಹೊರಟಿದ್ದರು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಅವರಲ್ಲಿ ಒಬ್ಬರು ಬಡೋಲಾ ಅವರ ಮೂಗಿಗೆ ಗುದ್ದಿದ್ದಾರೆ. ಇದರಿಂದ ಗಾಯಗೊಂಡ ವಿನೋದ್ ಕೆಳಕ್ಕೆ ಬಿದ್ದಿದ್ದಾರೆ. ಮತ್ತೊಬ್ಬ ಕತ್ತಿನಲ್ಲಿದ್ದ ಸರವನ್ನು ಎಳೆದು ಪರಾರಿ ಆಗಿದ್ದಾನೆ. ಆದರೆ ಗಾಯಗೊಂಡಿದ್ದ ವಿನೋದ್ ಪಕ್ಕದಲ್ಲಿ ಪಿಸ್ತೂಲ್ ಹಿಡಿದು ನಿಂತಿದ್ದ ಆರೋಪಿಯನ್ನು ಹಿಡಿದು ವಿನೋದ್ ಪೊಲೀಸರಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಗೌರವ್ನನ್ನು ಬಂಧಿಸಿದ್ದಾರೆ. ನಂತರ ಸ್ಥಳೀಯ ಪೊಲೀಸರ ನೆರವಿನೊಂದಿಗೆ ವಿನೋದ್, ಇತರ ಆರೋಪಿ ಪವನ್ ನನ್ನು ಬೆನ್ನಟ್ಟಿ ಬಂಧಿಸಿದ್ದಾರೆ.
ವಿನೋದ್ ಅವರನ್ನು ಪೊಲೀಸ್ ಎಂದು ತಿಳಿಯದ ಆರೋಪಿಗಳು ದಾಳಿ ನಡೆಸಿ ಸರವನ್ನು ಕಸಿದುಕೊಳ್ಳಲು ಹೋಗಿದ್ದಾರೆ.
ಆರೋಪಿಗಳ ಬಂಧನದ ಬಳಿಕ ವಿಚಾರಣೆ ನಡೆಸಿದ್ದು, ಈಗಾಗಲೇ ಆರೋಪಿಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುವುದು ಪತ್ತೆಯಾಗಿದೆ.
48 ವರ್ಷ ವಯಸ್ಸಿನ ವಿನೋದ್ ಬಡೋಲಾ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಹಲವಾರು ಉನ್ನತ ಮಟ್ಟದ ಕಾರ್ಯಾಚರಣೆಗಳು ಮತ್ತು ಎನ್ಕೌಂಟರ್ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಕ್ಟೋಬರ್ 2013 ರಲ್ಲಿ ಬಡೋಲಾ ಮತ್ತು ಅವರ ತಂಡವು ನಗರದ ಉದ್ಯಮಿಗಳಲ್ಲಿ ಭಯವನ್ನು ಹುಟ್ಟುಹಾಕಿದ ದರೋಡೆಕೋರ ನಿತು ದಾಬೋಡಿಯಾವನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದರು. ದಕ್ಷಿಣ ದೆಹಲಿಯ ವಸಂತ್ ಕುಂಜ್ನಲ್ಲಿರುವ ಪಂಚತಾರಾ ಹೋಟೆಲ್ ಬಳಿ ನಡೆದ ಭೀಕರ ಎನ್ಕೌಂಟರ್ನಲ್ಲಿ ಅವರು ದಾಬೋಡಿಯಾವನ್ನು ಎನ್ ಕೌಂಟರ್ ಮಾಡಿದ್ದರು.
ವಿನೋದ್ ಬಡೋಲಾ ಅವರು ವಿವಿಧ ಕಾರ್ಯಾಚರಣೆ ಹಾಗೂ ತಮ್ಮ ಶೌರ್ಯಕ್ಕಾಗಿ ರಾಷ್ಟ್ರಪತಿಗಳ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ